ಕಲಬುರಗಿ: ಬುದ್ಧ, ಬಸವ, ಅಂಬೇಡ್ಕರ್ ಜಯಂತಿ; ರಕ್ತದಾನ ಶಿಬಿರ

Date:

Share post:

ಕಲಬುರಗಿ: ನಗರದ ಕೆ. ಹೆಚ್. ಬಿ. ಗ್ರೀನ್ ಪಾರ್ಕ್ ಅಪಾರ್ಟ್ಮೆಂಟ್ ಕಾಲೋನಿಯಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಬಾಬು ಜಗ ಜೀವನ್ ರಾಮ್ ಅವರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಕ್ತ ದಾನ ಮಾಡುವ ಮೂಲಕ ಸಮಾಜಕ್ಕೆ ಸಮಾನತೆಯ ಸಂದೇಶ ಸಾರಿದರು.

ಎಲ್ಲಾ ಜಾತಿ ಜನರ ರಕ್ತದ ಬಣ್ಣ ಕೆಂಪು ಹೀಗಿರುವಾಗ ನಮ್ಮಲ್ಲಿ ಭೇದ ಭಾವಗಳು ಏಕೆ? ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಸಮಾನತೆ ಮತ್ತು ಸ್ವಾಭಿಮಾನದಿಂದ ಬದುಕುವoತಾಗಬೇಕು. ಶಿಕ್ಷಣದಿಂದ ಮಾತ್ರ ಸಮಾನತೆ ಸಾಧ್ಯ ಎಂದು ರಕ್ತದಾನ ಮಾಡುವ ಮೂಲಕ ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಮಹೇಶಕುಮಾರ್ ಹೆಬ್ಬಾಳೆ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕೆ. ಹೆಚ್. ಬಿ. ಗ್ರೀನ್ ಪಾರ್ಕ್ ಅಸೋಸಿಯೇಷನ್ ಅಧ್ಯಕ್ಷ ಸಂಜು ಶೆಟ್ಟಿ, ರಕ್ತ ದಾನಿಗಳಿಗೆ ಹಣ್ಣು ಹಂಪಲು ವಿತರಿಸಿ ಸಮಾಜಕ್ಕೆ ಸಹಕಾರಿಯಾಗುವಂತೆ ಕಾಲೋನಿಯ ಜನರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾಲೋನಿಯ ಮುಖಂಡರು, ಜಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಹಾಜರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...