ಕಲಬುರಗಿ: ಬುದ್ಧ, ಬಸವ, ಅಂಬೇಡ್ಕರ್ ಜಯಂತಿ; ರಕ್ತದಾನ ಶಿಬಿರ

Date:

Share post:

ಕಲಬುರಗಿ: ನಗರದ ಕೆ. ಹೆಚ್. ಬಿ. ಗ್ರೀನ್ ಪಾರ್ಕ್ ಅಪಾರ್ಟ್ಮೆಂಟ್ ಕಾಲೋನಿಯಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಬಾಬು ಜಗ ಜೀವನ್ ರಾಮ್ ಅವರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಕ್ತ ದಾನ ಮಾಡುವ ಮೂಲಕ ಸಮಾಜಕ್ಕೆ ಸಮಾನತೆಯ ಸಂದೇಶ ಸಾರಿದರು.

ಎಲ್ಲಾ ಜಾತಿ ಜನರ ರಕ್ತದ ಬಣ್ಣ ಕೆಂಪು ಹೀಗಿರುವಾಗ ನಮ್ಮಲ್ಲಿ ಭೇದ ಭಾವಗಳು ಏಕೆ? ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಸಮಾನತೆ ಮತ್ತು ಸ್ವಾಭಿಮಾನದಿಂದ ಬದುಕುವoತಾಗಬೇಕು. ಶಿಕ್ಷಣದಿಂದ ಮಾತ್ರ ಸಮಾನತೆ ಸಾಧ್ಯ ಎಂದು ರಕ್ತದಾನ ಮಾಡುವ ಮೂಲಕ ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಮಹೇಶಕುಮಾರ್ ಹೆಬ್ಬಾಳೆ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕೆ. ಹೆಚ್. ಬಿ. ಗ್ರೀನ್ ಪಾರ್ಕ್ ಅಸೋಸಿಯೇಷನ್ ಅಧ್ಯಕ್ಷ ಸಂಜು ಶೆಟ್ಟಿ, ರಕ್ತ ದಾನಿಗಳಿಗೆ ಹಣ್ಣು ಹಂಪಲು ವಿತರಿಸಿ ಸಮಾಜಕ್ಕೆ ಸಹಕಾರಿಯಾಗುವಂತೆ ಕಾಲೋನಿಯ ಜನರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾಲೋನಿಯ ಮುಖಂಡರು, ಜಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಹಾಜರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...