ಕಲಬುರಗಿ: ಬಸವೇಶ್ವರ ಆಸ್ಪತ್ರೆಯಲ್ಲಿ ವಿಶ್ವ ಹೈಪರ್ ಟೆನ್ಷನ್ ದಿನಾಚರಣೆ

Date:

Share post:

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಹೈಪರ್ ಟೆನ್ಷನ್ ದಿನಾಚರಣೆ ಅಂಗವಾಗಿ ವಿಶೇಷ ಜಾಗೃತಿ ಶಿಬಿರ ಮತ್ತು ಉಚಿತ ರಕ್ತದೊತ್ತಡ ತಪೋಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿಯಿತು.

ಈ ಸಂದರ್ಭದಲ್ಲಿ ಮೆಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ.ಸುರೇಶ್ ಹರಸೂರ ಮಾತನಾಡಿ, ಹೈ ಬಿಪಿ ಯಿಂದಾಗಿ ಅನೇಕ ತೊಂದರೆಗಳು ಜೀವಕ್ಕೆ ಅಪಾಯಗಳು ಸಂಭವಿಸಬಹುದು, ಆದ್ದರಿಂದ ಈ ಜಾಗೃತಿ ಶಿಬಿರದ ಮೂಲಕ ಹೈಪರ್ ಟೆನ್ಷನ್ ( ಹೈ ಬಿಪಿ) ಅನ್ನು ಬೇಗನೆ ಪತ್ತೆ ಹಚ್ಚಿ ಅದರಿಂದ ಆಗುವ ಸಂಭಾವ್ಯ ಅಪಾಯಗಳನ್ನು ತಪ್ಪಿಸುವುದು ಎಂದರು.

ಇಂದಿನ ದಿನಗಳಲ್ಲಿ ಹೈಪರ್ ಟೆನ್ಷನ್ ಕುರಿತಾದ ನಿರ್ವಹಣೆಯ ಮಹತ್ವದ ಬಗ್ಗೆ ಸಾರ್ವಜನಿಕರಿಗೆ ತಿಳಿಸುವುದು ಅಗತ್ಯವಿದೆ ಎಂದರು.

ಈ ಶಿಬಿರದಲ್ಲಿ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಬಿಪಿ, ಶುಗರ್ ತಪಾಸಣೆ ಮಾಡಿಕೊಂಡು ತಜ್ಞ ವೈದ್ಯರಿಂದ ನಿಯಮಿತ ರಕ್ತದೊತ್ತಡ, ಸಕ್ಕರೆ ಕಾಯಿಲೆಯನ್ನು ಹೇಗೆ ನಿಯಂತ್ರಣ ಮಾಡಿಕೊಂಡು ಜೀವನಶೈಲಿ ನಡೆಸಬೇಕೆಂದು ಸಲಹೆ ಪಡೆದುಕೊಂಡರು.
ಈ ಶಿಬಿರದ ಮೇಲುಸ್ತುವಾರಿಯನ್ನು ಆಸ್ಪತ್ರೆಯ ಮೆಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ. ಸುರೇಶ್ ಹರಸೂರ, ಸಹ ಪ್ರಾಧ್ಯಾಪಕ ಡಾ.ಸಿ ಬಿ ನಂದ್ಯಾಳ ವಹಿಸಿದ್ದರು.

ಈ ಶಿಬಿರವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ವೈದ್ಯರ ತಂಡಕ್ಕೆ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ ನಮೋಶಿ, ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ, ಕಾರ್ಯದರ್ಶಿ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿ ಡಾ ಕೈಲಾಸ ಪಾಟೀಲ್ ಹಾಗೂ ಆಸ್ಪತ್ರೆಯ ಸಂಚಾಲಕರಾದ ಡಾ.ಕಿರಣ್ ದೇಶಮುಖ್ ಹಾಗೂ ಆಡಳಿತ ಮಂಡಳಿ ಸದಸ್ಯರು, ವೈದ್ಯಕೀಯ ಅಧಿಕ್ಷಕರಾದ ಡಾ.ಆನಂದ ಗಾರಂಪಳ್ಳಿ ಅಭಿನಂದಿಸಿದರು.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...