ಕಲಬುರಗಿ| ಜೈಲಿನಲ್ಲಿ ಜಾಮರ್ ಅಳವಡಿಕೆ; ಪ್ರಿಕ್ವೆಸ್ಸಿ ಕಡಿಮೆ ಮಾಡುವಂತೆ ಆಗ್ರಹ

Date:

Share post:

ಕಲಬುರಗಿ : ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಜಾಮರ್ ಅಳವಡಿಕೆ ಮಾಡಲಾಗಿದ್ದು, ಇದರಿಂದಾಗಿ ಅಕ್ಕ ಪಕ್ಕದ ಗ್ರಾಮದ ಜನರಿಗೆ ತೀವ್ರ ಸಂಕಷ್ಟವಾಗುತ್ತಿದೆ. ಕೂಡಲೇ ಪ್ರಿಕ್ವೆನ್ಸಿ ಕಡಿಮೆ ಮಾಡಬೇಕೆಂದು ಜೈಲಿನ ಸುತ್ತಮುತ್ತಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಕುರಿತು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಡಾ.ಅನಿತಾ ಅವರಿಗೆ ನಂದಿಕೂರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪವನಕುಮಾರ ವಳಕೇರಿ ನೇತೃತ್ವದಲ್ಲಿ ಪಾಣೆಗಾಂವ, ಸೀತನೂರ ಮತ್ತು ನಂದಿಕೂರ ಗ್ರಾಮಸ್ಥರು ಸೇರಿಕೊಂಡು ಮನವಿ ಪತ್ರ ಸಲ್ಲಿಸಿ, ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಪವನ್ ಕುಮಾರ್ ವಳಕೇರಿ, ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸಬಾರದೆಂದು ಜಾಮರ್ ಅಳವಡಿಕೆ ಮಾಡಿದ್ದಾರೆ. ಆದರೆ ಇದರ ಶಿಕ್ಷೆ ಕೈದಿಗಳಿಗಿಂತ ಜನಸಾಮಾನ್ಯರಿಗೆ ಹೆಚ್ಚು ಆಗುತ್ತಿದೆ. ಜೈಲು ಸುತ್ತಲಿನ ಗ್ರಾಮಗಳಾದ ಪಾಣೇಗಾಂವ, ಸೀತನೂರ ಮತ್ತು ನಂದಿಕೂರ ಗ್ರಾಮಗಳ ಜನರು ತತ್ತರಿಸಿ ಹೋಗಿದ್ದಾರಲ್ಲದೆ, ಈ ಗ್ರಾಮಗಳ ಸಾರ್ವಜನಿಕರಿಗೆ ಮೊಬೈಲ್ ಕರೆಗಳು ಬರುವುದಿಲ್ಲ, ಕರೆ ಮಾಡುವ ಸಾಧ್ಯತೆಯೂ ಇಲ್ಲದಂತಾಗಿದೆ ಎಂದು ಆರೋಪಿಸಿದ್ದಾರೆ.

ಸೀತನೂರ್ ಗ್ರಾಮದಲ್ಲಿ ನೆಟ್ವರ್ಕ್ ಬ್ಯುಸಿ ಎಂದು ತೋರಿಸುತ್ತಿದು, ಫೋನ್ ಕರೆ ಮಾಡಿದವರು ತಪ್ಪಾಗಿ ಅರ್ಥಮಾಡಿಕೊಂಡಿ ಉದ್ದೇಶಪೂರ್ವಕವಾಗಿಯೇ ಕರೆ ನಿರ್ಲಕ್ಷಿಸಲಾಗಿದೆ ಎಂಬ ಭಾವನೆ ಮೂಡಿಸುತ್ತಿದ್ದಾರೆ. ಸಮಸ್ಯೆಗಳಿಂದಾಗಿ ಗ್ರಾಮಸ್ಥರು, ಅವರ ಸ್ನೇಹಿತರ, ಸಂಬಂಧಿಕರು, ಅಧಿಕಾರಿಗಳು, ಮತ್ತು ವಿದೇಶಗಳಿಂದ ಕರೆ ಮಾಡುವವರು ಮಹತ್ವದ ವಿಚಾರಗಳನ್ನು ಚರ್ಚಿಸಲು ಸಾಧ್ಯವಾಗದೆ ಬಹಳ ತೊಂದರೆ ಈಡಾಗಿದ್ದಾರೆ. ವೈಫೈ ಸಮಸ್ಯೆಯಾಗುತ್ತಿದೆ. ಆನ್‌ಲೈನ್ ಬ್ಯಾಂಕಿಂಗ್‌ಗೆ ತೊಂದರೆಯಾಗಿದೆ. ಒಟಿಪಿಗಳು ಸ್ವೀಕಾರವಾಗುತ್ತಿಲ್ಲ. ತುರ್ತು ಸೇವೆಗಳು, ಯುಪಿಐ ಪಾವತಿಗೆ ತೊಂದರೆಯಾಗಿದ್ದು, ದೈನಂದಿನ ಜನಜೀವನದ ಮೇಲೆ ಭಾರಿ ಪರಿಣಾಮ ಬೀರಿದೆ. ನಿತ್ಯದ ವ್ಯಾಪಾರ ವಹಿವಾಟು ಸೇರಿದಂತೆ ಆನ್‌ಲೈನ್ ಚಟುವಟಿಕೆಗಳಿಗೆ ತೀವ್ರ ಅಡ್ಡಿಚಣೆಯಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಹೀಗಾಗಿ ಜೈಲಿನ ಫ್ರೀಕ್ವೆನ್ಸಿ ತುಂಬಾ ಕಡಿಮೆ ಮಾಡಬೇಕು ಮತ್ತು ಅದರ ವ್ಯಾಪ್ತಿ ಕಡಿಮೆಗೊಳಿಸಿ ಜನರಿಗೆ ಯಾವುದೇ ರೀತಿ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಇದೇ ದಿ. 26ರಂದು ಮುಖ್ಯ ಹೆದ್ದಾರಿ ರಸ್ತೆ ಬಂದ್ ಮಾಡಿ ಉಗ್ರ ಹೋರಾಟ ಮಾಡಲಾಗುವದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಪ್ರಮುಖರಾದ ಶಂಕರ್ ಕಾರ್ಬಾರಿ, ನಾಗೇಶ್ ಡಿ. ಮುಚಖೇಡ, ಶರಣಯ್ಯ ಸ್ವಾಮಿ ಸೀತನೂರ್ , ಹುಸೇನ್ ಸಾಬ್ ಮೋಹಜನ್, ವೀರಯ್ಯ ಸ್ವಾಮಿ, ಕಲ್ಯಾಣರಾವ್ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...