ಕಲಬುರಗಿ| ಮೇ.25ರಂದು ಯಳಸಂಗಿ ಯಲ್ಲಿ ಡಾ.ಅಂಬೇಡ್ಕರ್ ಜಯಂತಿ: ಸಂತೋಷ ಪಾಳಾ

Date:

Share post:

ಕಲಬುರಗಿ: ದಲಿತ ಸೇನೆ ವತಿಯಿಂದ ಇದೇ ಮೇ.25ರಂದು ಆಳಂದ ತಾಲ್ಲೂಕಿನ ಯಳಸಂಗಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 134ನೇ ಜಯಂತ್ಯೋತ್ಸವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸೇನೆ ಗುಲಬರ್ಗಾ ವಿಭಾಗೀಯ ಪ್ರಧಾನ ಕಾರ್ಯದರ್ಶಿ ಸಂತೋಷ ಪಾಳಾ ಹೇಳಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ಮುಂಜಾನೆ 9.30 ಗಂಟೆಗೆ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದ್ದು, ಪೂಜ್ಯ ಭಂತೆ ಅಮರಜ್ಯೋತಿ ಧ್ಯಾನ ಭೂಮಿ, ಗುರುಪಾದಲಿಂಗಪ್ಪ ಶಿವಯೋಗಿ, ಪರಮಾನಂದ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದರು.

ಶಾಸಕ ಬಿ.ಆರ್.ಪಾಟೀಲ್ ಕಾರ್ಯಕ್ರಮವನ್ನು ಉದ್ಘ‌ಾಟಿಸುವರು. ದಲಿತ ಸೇನೆ ರಾಜ್ಯಾಧ್ಯಕ್ಷ ಹನುಮಂತ ಯಳಸಂಗಿ ಅಧ್ಯಕ್ಷೆ ವಹಿಸಲಿದ್ದಾರೆ. ಉಪನ್ಯಾಸಕರಾದ ಡಾ.ಅನೀಲ್ ಟೆಂಗಳಿ, ಪತ್ರಕರ್ತ ಮತ್ತು ಸಾಹಿತಿ ಸುರೇಶ ಬಡಿಗೇರ್ ಮುಖ್ಯ ಭಾಷಣಕಾರರಾಗಿ ಆಗಮಿಸುವರು. ದತ್ತರಾಜ್ ಗುತ್ತೇದಾರ್, ಸಿದ್ದರಾಮ ಪ್ಯಾಟಿ, ನಿಂಬರ್ಗಾ ಪಿಎಸ್ಐ ಇಂದುಮತಿ, ವೀರಯ್ಯ ಮಠಪತಿ, ವಿಶ್ವನಾಥ ಕವಂಟಗಿ ಸೇರಿದಂತೆ ಅನೇಕರು ಬಹಿರಂಗ ಸಭೆಯ ವೇದಿಕೆಯ ಮೇಲೆ ಉಪಸ್ಥಿತವಿರುವರು ಎಂದು ವಿವರಿಸಿದರು.

ಅಂದು ಮಧ್ಯಾಹ್ನ 2.00 ಗಂಟೆಗೆ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ವರ್ಣರಂಜಿತ ಮೆರವಣಿಗೆಗೆ ಚಾಲನೆ ನೀಡುವರು, ಗ್ರಾಮದ ಸರಕಾರಿ ನೌಕರಸ್ಥರಿಗೆ ಸನ್ಮಾನ ಸಮಾರಂಭ ಕೂಡ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಉದಯ ಖಣಗೆ, ಶಿವಶರಣಪ್ಪ ಶಿಂಗೆ, ಶರಣಬಸಪ್ಪ ಚಂಡಕೆ, ಶಿವಲಿಂಗಪ್ಪ ಗೊಚ್ಚೆ, ಅಮರ ಚಂಡಕೆ ಸೇರಿದಂತೆ ಇತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...