ಕಲಬುರಗಿ ನಗರಕ್ಕೆ ಕುಡಿಯುವ ನೀರಿನ ಕಾಮಗಾರಿ ವಿಳಂಬ: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

Date:

Share post:

ಕಲಬುರಗಿ: ಕಲಬುರಗಿ ನಗರಕ್ಕೆ ವಾರದ ಏಳುದಿನಗಳಲ್ಲಿ ದಿನದ 24 ಗಂಟೆ ನಿರಂತರ ( 24/7) ಕುಡಿಯುವ ನೀರು ಒದಗಿಸುವ ಯೋಜನೆ ಜಾರಿಗೆ ತಡವಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ ಅಂಡ್ ಟಿ ಕಂಪನಿಯ ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನಲ್ಲಿ ಸಭೆ ನಡೆಸಿ ಚರ್ಚಿಸಿದರು.

ಈ ಯೋಜನೆ ಕಲಬುರಗಿ ‌ನಗರದ ನಾಗರಿಕರಿಗೆ ಪ್ರಮುಖವಾಗಿದ್ದು, ಪ್ರಸ್ತುತ ನಡೆಯುತ್ತಿರುವ ಕಾಮಗಾರಿ ಸಂತೃಪ್ತಿ ತಂದಿಲ್ಲ ಎಂದು ಸಚಿವರು ಅಧಿಕಾರಿಗಳ ತಂಡಕ್ಕೆ ತಿಳಿಸಿದರು.

ಯೋಜನೆಯ ಪ್ರಗತಿ ಪರಿಶೀಲಿಸಿ ತಂಡದ ಅಧಿಕಾರಿಗಳು ಒದಗಿಸಿದ ಮಾಹಿತಿಯನ್ನು ಪರಿಶೀಲಿಸಿದ ನಂತರ ಸಚಿವರು ಯೋಜನೆ ಪೂರ್ಣಗೊಳಿಸಲು ಸಮಯ ನಿಗದಿಪಡಿಸುವುದರ ಜೊತೆಗೆ ಕಂಪನಿಗೆ ಕೆಲ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಯೋಜನೆ ವಿಳಂಬ ಕುರಿತಂತೆ ಯಾವುದೇ ರಿಯಾಯಿತಿ ನೀಡಲಾಗುವುದಿಲ್ಲ. ಎಲ್ ಅಂಡ್ ಟಿ ಕಂಪನಿಗೆ ನಿಗದಿಪಡಿಸಿದ ಪರಿಷ್ಕೃತ ಕಾಲಮಿತಿಯೊಳಗೆ ಯೋಜನೆ ಪೂರ್ಣಗೊಳಿಸಬೇಕು. ಒಂದು ವೇಳೆ ವಿಫಲವಾದರೆ ಗುತ್ತಿಗೆಯನ್ನು ರದ್ದುಗೊಳಿಸಿ ಬೇರೆ ಏಜೆನ್ಸಿಗೆ ಕೊಡಲಾಗುವುದು. ಕಾಲಮಿತಿಯೊಳಗೆ ಮುಗಿಸುವ ಉದ್ದೇಶದ ಸಾರ್ವಜನಿಕರ ಅತ್ಯಗತ್ಯ ಸೇವೆಗಳಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲಾಗುವುದಿಲ್ಲ. ಕಲಬುರಗಿಯ ಜನರು ಇದಕ್ಕೆ ಅರ್ಹರಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...