ಕಲಬುರಗಿ ನಗರಕ್ಕೆ ಕುಡಿಯುವ ನೀರಿನ ಕಾಮಗಾರಿ ವಿಳಂಬ: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

Date:

Share post:

ಕಲಬುರಗಿ: ಕಲಬುರಗಿ ನಗರಕ್ಕೆ ವಾರದ ಏಳುದಿನಗಳಲ್ಲಿ ದಿನದ 24 ಗಂಟೆ ನಿರಂತರ ( 24/7) ಕುಡಿಯುವ ನೀರು ಒದಗಿಸುವ ಯೋಜನೆ ಜಾರಿಗೆ ತಡವಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ ಅಂಡ್ ಟಿ ಕಂಪನಿಯ ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನಲ್ಲಿ ಸಭೆ ನಡೆಸಿ ಚರ್ಚಿಸಿದರು.

ಈ ಯೋಜನೆ ಕಲಬುರಗಿ ‌ನಗರದ ನಾಗರಿಕರಿಗೆ ಪ್ರಮುಖವಾಗಿದ್ದು, ಪ್ರಸ್ತುತ ನಡೆಯುತ್ತಿರುವ ಕಾಮಗಾರಿ ಸಂತೃಪ್ತಿ ತಂದಿಲ್ಲ ಎಂದು ಸಚಿವರು ಅಧಿಕಾರಿಗಳ ತಂಡಕ್ಕೆ ತಿಳಿಸಿದರು.

ಯೋಜನೆಯ ಪ್ರಗತಿ ಪರಿಶೀಲಿಸಿ ತಂಡದ ಅಧಿಕಾರಿಗಳು ಒದಗಿಸಿದ ಮಾಹಿತಿಯನ್ನು ಪರಿಶೀಲಿಸಿದ ನಂತರ ಸಚಿವರು ಯೋಜನೆ ಪೂರ್ಣಗೊಳಿಸಲು ಸಮಯ ನಿಗದಿಪಡಿಸುವುದರ ಜೊತೆಗೆ ಕಂಪನಿಗೆ ಕೆಲ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಯೋಜನೆ ವಿಳಂಬ ಕುರಿತಂತೆ ಯಾವುದೇ ರಿಯಾಯಿತಿ ನೀಡಲಾಗುವುದಿಲ್ಲ. ಎಲ್ ಅಂಡ್ ಟಿ ಕಂಪನಿಗೆ ನಿಗದಿಪಡಿಸಿದ ಪರಿಷ್ಕೃತ ಕಾಲಮಿತಿಯೊಳಗೆ ಯೋಜನೆ ಪೂರ್ಣಗೊಳಿಸಬೇಕು. ಒಂದು ವೇಳೆ ವಿಫಲವಾದರೆ ಗುತ್ತಿಗೆಯನ್ನು ರದ್ದುಗೊಳಿಸಿ ಬೇರೆ ಏಜೆನ್ಸಿಗೆ ಕೊಡಲಾಗುವುದು. ಕಾಲಮಿತಿಯೊಳಗೆ ಮುಗಿಸುವ ಉದ್ದೇಶದ ಸಾರ್ವಜನಿಕರ ಅತ್ಯಗತ್ಯ ಸೇವೆಗಳಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲಾಗುವುದಿಲ್ಲ. ಕಲಬುರಗಿಯ ಜನರು ಇದಕ್ಕೆ ಅರ್ಹರಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...