ಕಲಬುರಗಿ| ಛಲವಾದಿ ನಾರಾಯಣಸ್ವಾಮಿ ಗಡಿಪಾರು ಮಾಡುವಂತೆ ಮಲ್ಲಿಕಾರ್ಜುನ ನೀಲೂರ ಆಗ್ರಹ

Date:

Share post:

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವಾಚ್ಯ ಶಬ್ದದಿಂದ ನಿಂದನೆ ಮಾಡಿದ್ದಾರೆ. ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದು ಮಾಡಿ, ಅವರನ್ನು ಬಂಧಿಸಿ ಕೂಡಲೇ ಗಡಿಪಾರು ಮಾಡಬೇಕೆಂದು ಕಾಂಗ್ರೆಸ್ ನ ಪರಿಶಿಷ್ಠ ಜಾತಿ ವಿಭಾಗದ ಉಪಾಧ್ಯಕ್ಷ ಮಲ್ಲಿಕಾರ್ಜುನ ನೀಲೂರ ಹೇಳಿದ್ದಾರೆ.

ನಾರಾಯಣಸ್ವಾಮಿ ಕ್ಷಮೆ ಕೇಳಿದರೆ ಸಾಲದು, ಯಾವುದೇ ಕಾರ್ಯಕ್ರಮಕ್ಕೆ ಹೋದರೆ ಕಪ್ಪು ಬಾವುಟ ಪ್ರದರ್ಶನ ಮಾಡಬೇಕಾಗುತ್ತದೆ. ಛಲವಾದಿ ಬಿಜೆಪಿ ರಾಷ್ಟ್ರೀಯ ನಾಯಕರಿಗೆ, ಹೈಕಮಾಂಡ್ ಮೆಚ್ಚಿಸಲು ಖರ್ಗೆ ಕುಟುಂಬದ ಬಗ್ಗೆ ಇಲ್ಲ ಸಲ್ಲದ ಕೀಳುಮಟ್ಟದ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಛಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ ಪಕ್ಷದಲ್ಲಿ ಬಂದಾಗ ಮುಂಚಿತ ಇದ್ದ ದಲಿತರನ್ನೇ ಬದಿಗಿಟ್ಟು ಈಗ ತಮ್ಮ ಸ್ವಾರ್ಥಕ್ಕಾಗಿ ತಾವೇ ವಿಧಾನಪರಿಷತ್ ಸದಸ್ಯರಾಗಿದ್ದೀರಿ ಇದು ದಲಿತರಿಗೆ ಮಾಡಿರು ಅನ್ಯಾಯ ಅಲ್ವ ಎಂದು ಅವರು ಪ್ರಶ್ನಿಸಿದರು?. ತನ್ನ ನೀಚ ಬುದ್ಧಿ ಕರ್ನಾಟಕ ಜನತೆಗೆ ಗೊತ್ತಿಲ್ವಾ ಮತ್ತು ಬಿಜೆಪಿಯ ಸರ್ವ ಮುಖಂಡರು ಮಾಡುತ್ತಿರುವ ಕುತಂತ್ರವನ್ನು ಎಳೆ ಎಳೆಯಾಗಿ ಬಿಚ್ಚಿಡುತ್ತಿರುವ ಡೈನಾಮಿಕ್ ಲೀಡರ್ ನಾಯಕರಾಗಿ ಹೊರಹೊಮ್ಮುತ್ತಿರುವುದು ಅವರನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದರು.

ಕಲಬುರಗಿ ಜಿಲ್ಲೆಗೆ ವಿಶೇಷವಾಗಿ ಅಭಿವೃದ್ಧಿ ಆಗುತ್ತಿರುವುದನ್ನು ಹಾಗೂ ಉದ್ಯೋಗ ಮೇಳ ಹೀಗೆ ಹತ್ತು ಹಲವಾರು ಯೋಜನೆಗಳನ್ನು ಮಾಡುತ್ತಿರುವುದನ್ನು ಇವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಅವರು ಆರೋಪಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...