ಕಲಬುರಗಿ| ಕೋವಿಡ್-19: ಜಿಲ್ಲೆಯ ಸಾರ್ವಜನಿಕರು ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಡಿ.ಸಿ ಸೂಚನೆ

Date:

Share post:

ಕಲಬುರಗಿ: 2025ನೇ ಸಾಲಿನಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್-19ಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ವರದಿಯಾಗಿರುವುದಿಲ್ಲ. ಸಾರ್ವಜನಿಕರು ಭಯಪಡುವ ಅವಶ್ಯಕತೆಯಿಲ್ಲ. ಈ ಕುರಿತು ಆರೋಗ್ಯ ಇಲಾಖೆಯಿಂದ ನೀಡಲಾದ ಕೆಳಕಂಡ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

 

ರಾಜ್ಯದಲ್ಲಿ 2025ರ ಜನವರಿಯಿಂದ ಮೇ 26 ರವರೆಗೆ ಒಟ್ಟು 135 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 80 ಪ್ರಕರಣಗಳು ಸಕ್ರೀಯವಾಗಿರುತ್ತವೆ ಹಾಗೂ ಒಂದು ಮರಣದ ಪ್ರಕರಣ ವರದಿಯಾಗಿರುತ್ತದೆ. ಈಗಾಗಲೇ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಒಟ್ಟು 20 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಅದರಲ್ಲಿ 10 ಸಾಮಾನ್ಯ ಹಾಸಿಗೆಗಳು, 05 ಹೆಚ್.ಡಿ.ಯು ಮತ್ತು 05 ಐ.ಸಿ.ಯು ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಖಚಿತ ಪ್ರಕರಣಗಳಲ್ಲಿ ಅಲ್ಪಪ್ರಮಾಣದ ಲಕ್ಷಣಗಳುಳ್ಳ ರೋಗಿಗಳಿಗೆ ಹೋಮ ಐಸೋಲೇಷನ ಮಾಡಲಾಗುವುದು ಹಾಗೂ ತೀವ್ರತರದ ರೋಗ ಲಕ್ಷಣಗಳುಳ್ಳ ರೋಗಿಗಳಿಗೆ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ.

 

ಶೀತ, ನೆಗಡಿ, ಜ್ವರ ಇರುವ ತಮ್ಮ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಉತ್ತಮ. ಸಾರ್ವಜನಿಕರು ಆಗಾಗೆ ಸಾಬೂನಿನಿಂದ ಅಥವಾ ಸೈನಿಟೈಸರ್‍ ನಿಂದ ಕೈ ತೊಳೆಯಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ ಉಪಯೋಗಿಸಬೇಕು. ಯಾವುದೇ ತರಹದ ಕೆಮ್ಮು, ನೆಗಡಿ, ಗಂಟಲು ನೋವು, ಜ್ವರ ಕಂಡುಬಂದಲ್ಲಿ ಹತ್ತಿರದ ಸರಕಾರಿ ಆಸ್ಪತ್ರೆಗೆಹೋಗಿ ಚಿಕಿತ್ಸೆ ಪಡೆಯಬೇಕು. ವಿಶೇಷವಾಗಿ ಮಕ್ಕಳು, ವೃದ್ಧರು, ಗರ್ಭೀಣಿ ಸ್ತ್ರೀಯರಲ್ಲಿ ರೋಗ ಲಕ್ಷಣಗಳು ಕಂಡುಬಂದಲ್ಲಿ ಹೆಚ್ಚಿನ ನಿಗಾ ವಹಿಸಬೇಕು.

 

ರಾಜ್ಯದ ಮಾರ್ಗಸೂಚಿಯಂತೆ ತೀವ್ರ ಉಸಿರಾಟದ ತೊಂದರೆ ಇರುವವರಿಗೆ ಹಾಗೂ ಗರ್ಭೀಣಿಯರು, ಮಕ್ಕಳು, ವೃದ್ದರಲ್ಲಿ ಲಕ್ಷಣಗಳು ಕಂಡುಬಂದಲ್ಲಿ ವೈದ್ಯರ ಸಲಹೆ ಮೇರೆಗೆ ಕೋವಿಡ್-19 ನ ಪರೀಕ್ಷೆ ಮಾಡಲಾಗುತ್ತದೆ. ಕೋವಿಡ್-19 ಸೋಂಕನ್ನು ದೃಢಪಡಿಸಿಕೊಳ್ಳಲು RT-PCR ಪರೀಕ್ಷೆಗೆ ಕಲಬುರಗಿ (VRDL GIMS) ಜಿಮ್ಸ್ ಪ್ರಯೋಗಾಶಾಲೆ ನಿಗದಿಪಡಿಸಿದ್ದು, ಆದ್ದರಿಂದ ಜಿಲ್ಲೆಯ ಎಲ್ಲಾ ಮಾದರಿಗಳು ಅಲ್ಲಿಯೇ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...