ಕಲಬುರಗಿ| ಸಾರ್ವಜನಿಕರಿಗೆ, ಸರ್ಕಾರಿ ಕಾಮಗಾರಿಗಳಿಗೆ ಸಾಕಷ್ಟು ಮರಳು ಮಾರಾಟಕ್ಕೆ ಲಭ್ಯ: ಬಿ.ಫೌಜಿಯಾ ತರನ್ನುಮ್

Date:

Share post:

ಕಲಬುರಗಿ: ಭಾರತ ಸರ್ಕಾರದ ಗಣಿ ಮಂತ್ರಾಲಯದ ಸುಸ್ಥಿರ ಮರಳು ಗಣಿಗಾರಿಕೆ ಮಾರ್ಗಸೂಚಿಗಳು-2016 ರನ್ವಯ ಮಳೆಗಾಲದಲ್ಲಿ ಮರಳು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ತಿಳಿಸಿರುವುದರಿಂದ ಜಿಲ್ಲೆಯ ಮರಳು ಬ್ಲಾಕ್ ಗಳಲ್ಲಿ ಮುಂದಿನ ಆದೇಶದವರೆಗೆ ಮರಳು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದ್ದಾದರು ಸಾರ್ವಜನಿಕರಿಗೆ ಮತ್ತು ಸರ್ಕಾರಿ ಕಾಮಗಾರಿಗಳಿಗೆ ಜಪ್ತಿ ಮಾಡಿಕೊಳ್ಳಲಾದ ಸಾಕಷ್ಟು ಮರಳು ಮಾರಾಟಕ್ಕೆ ಲಭ್ಯವಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಜಿಲ್ಲೆಯ ಅಫಜಲಪೂರ, ಜೇವರ್ಗಿ ಹಾಗೂ ಚಿತ್ತಾಪೂರ ತಾಲ್ಲೂಕು ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಗಣಿಗಾರಿಕೆ ಮಾಡಿ ದಾಸ್ತಾನು ಮಾಡಿರುವ ಮರಳನ್ನು ಜಪ್ತಿ ಪಡಿಸಿದ್ದು, ಸಾಕಷ್ಟು ಮರಳು ಸರ್ಕಾರಿ ಕಾಮಗಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಟ್ಟಡ ಕಾಮಗಾರಿಗಳಿಗೆ ಬಳಕೆಗೆ ಲಭ್ಯವಿರುತ್ತದೆ ಎಂದಿದ್ದಾರೆ.

ಸಾರ್ವಜನಿಕರು ಜಪ್ತಿಪಡಿಸಿದ ಮರಳನ್ನು ಪಡೆಯಲು ಸರ್ಕಾರ ನಿಗದಿಪಡಿಸಿರುವ ಪ್ರತಿ ಮೆಟ್ರಿಕ್ ಟನ್ ಗೆ 850 ರೂ. ಗಳಂತೆ ಪಾವತಿಸಿ ನಿಯಮಾನುಸಾರ ಖನಿಜ ರವಾನೆ ಪರವಾನಿಗೆ ಪಡೆದು, ತಮ್ಮ ಸ್ವಂತ ಖರ್ಚಿನಲ್ಲಿ ಮರಳನ್ನು ತೆಗೆದುಕೊಂಡು ಹೋಗಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಮರಳು ಪಡೆಯಲು ಅಫಜಲಪೂರ, ಆಳಂದ ತಾಲ್ಲೂಕಿನ ನಾಗರೀಕರು ಲೋಕೋಪಯೋಗಿ ಇಲಾಖೆಯ ಅಫಜಲಪೂರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಲಕ್ಷ್ಮೀಕಾಂತ ಬಿರಾದಾರ-9148570109, ಚಿತ್ತಾಪೂರ, ಸೇಡಂ, ಚಿಂಚೋಳಿ, ಕಾಳಗಿ, ಶಹಾಬಾದ್ ಹಾಗೂ ಕಲಬುರಗಿ ತಾಲ್ಲೂಕಿನ ನಾಗರೀಕರು ಲೋಕೋಪಯೋಗಿ ಇಲಾಖೆಯ ಚಿತ್ತಾಪೂರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಸಲೀಂ-9448219377, ಜೇವರ್ಗಿ, ಯಡ್ರಾಮಿ, ಕಮಲಾಪೂರ ತಾಲ್ಲೂಕಿನ ನಾಗರೀಕರು ಲೋಕೋಪಯೋಗಿ ಇಲಾಖೆಯ ಜೇವರ್ಗಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ತ್ರೈಜಾಮುಲ್ ಇಸ್ಲಾಂ-944979574 ಅವರನ್ನು ಸಂಪರ್ಕಿಸಬಹುದಾಗಿದೆ.

ಇದಲ್ಲದೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ಸೋಮಶೇಖರ್ ಎಂ.-9945229477 ಮತ್ತು ಭೂವಿಜ್ಞಾನಿ ಪ್ರವೀಣ-9008529896 ಇವರನ್ನು ಸಹ ಸಂಪರ್ಕಿಸಬಹುದಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...