BREAKING: ಹಿರಿಯ ಕವಿ ಎಚ್.ಎಸ್.ವೆಂಕಟೇಶ್ ಮೂರ್ತಿ ಇನ್ನಿಲ್ಲ!

Date:

Share post:

ಬೆಂಗಳೂರು: ಮಕ್ಕಳ, ಯುವಕರ, ಮತ್ತು ಮಹಿಳೆಯರಿಗಾಗಿ ಗೀತೆಗಳನ್ನು ರಚಿಸಿ, ಹೆಸರು ವಾಸಿಯಾದ ಹಿರಿಯ ಕವಿ, ಲೇಖಕ ಎಚ್.ಎಸ್.ವೆಂಕಟೇಶ್ ಮೂರ್ತಿ ಅವರು ನಿಧನರಾಗಿದ್ದಾರೆ.

80 ವರ್ಷ ವಯಸ್ಸಿನ ಎಚ್.ಎಸ್.ವೆಂಕಟೇಶ್ ಮೂರ್ತಿ ಅವರು ತಮ್ಮ ವಯೋಸಹಜ ಕಾಯಿಲೆಗಳಿಂದ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

1944ರಲ್ಲಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದ ಮೂರ್ತಿ ಅವರು ಕನ್ನಡ ಸಾಹಿತ್ಯಕ್ಕೆ ಅವಿರತ ಕೊಡುಗೆ ನೀಡಿದ್ದರು.

ಅವರು ತಾಪಿ, ಅಮಾನುಷರು, ಅಗ್ನಿಮುಖಿ, ವೇದವತಿ ಸೇರಿದಂತೆ ಹಲವು ಕಾದಂಬರಿ, ಕವಿತೆ, ವಿಮರ್ಶೆ ಸೇರಿದಂತೆ ಹಲವು ಪ್ರಕಾರದ ಸಾಹಿತ್ಯವನ್ನು ಕನ್ನಡ ಸಾರಸತ್ವ ಲೋಕಕ್ಕೆ ಕೊಡುಗೆ ಕೊಟ್ಟಿದ್ದಾರೆ.

ಮೂರ್ತಿ ಅವರು 2020ರಲ್ಲಿ ಕಲಬುರಗಿಯಲ್ಲಿ ನಡೆದಿದ್ದ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...