BREAKING: ಹಿರಿಯ ಕವಿ ಎಚ್.ಎಸ್.ವೆಂಕಟೇಶ್ ಮೂರ್ತಿ ಇನ್ನಿಲ್ಲ!

Date:

Share post:

ಬೆಂಗಳೂರು: ಮಕ್ಕಳ, ಯುವಕರ, ಮತ್ತು ಮಹಿಳೆಯರಿಗಾಗಿ ಗೀತೆಗಳನ್ನು ರಚಿಸಿ, ಹೆಸರು ವಾಸಿಯಾದ ಹಿರಿಯ ಕವಿ, ಲೇಖಕ ಎಚ್.ಎಸ್.ವೆಂಕಟೇಶ್ ಮೂರ್ತಿ ಅವರು ನಿಧನರಾಗಿದ್ದಾರೆ.

80 ವರ್ಷ ವಯಸ್ಸಿನ ಎಚ್.ಎಸ್.ವೆಂಕಟೇಶ್ ಮೂರ್ತಿ ಅವರು ತಮ್ಮ ವಯೋಸಹಜ ಕಾಯಿಲೆಗಳಿಂದ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

1944ರಲ್ಲಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದ ಮೂರ್ತಿ ಅವರು ಕನ್ನಡ ಸಾಹಿತ್ಯಕ್ಕೆ ಅವಿರತ ಕೊಡುಗೆ ನೀಡಿದ್ದರು.

ಅವರು ತಾಪಿ, ಅಮಾನುಷರು, ಅಗ್ನಿಮುಖಿ, ವೇದವತಿ ಸೇರಿದಂತೆ ಹಲವು ಕಾದಂಬರಿ, ಕವಿತೆ, ವಿಮರ್ಶೆ ಸೇರಿದಂತೆ ಹಲವು ಪ್ರಕಾರದ ಸಾಹಿತ್ಯವನ್ನು ಕನ್ನಡ ಸಾರಸತ್ವ ಲೋಕಕ್ಕೆ ಕೊಡುಗೆ ಕೊಟ್ಟಿದ್ದಾರೆ.

ಮೂರ್ತಿ ಅವರು 2020ರಲ್ಲಿ ಕಲಬುರಗಿಯಲ್ಲಿ ನಡೆದಿದ್ದ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...