ಕಲಬುರಗಿ| ಬಿಜೆಪಿ‌ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

Date:

Share post:

ಕಲಬುರಗಿ: ಕಲಬುರಗಿಯಲ್ಲಿ ಪೊಲೀಸರನ್ನು 15 – 20 ನಿಮಿಷ ತಡೆ ಹಿಡಿದರೆ, ಮುಸ್ಲಿಮರನ್ನು ನಮ್ಮ ಬೋರಮಾಠಿ ಸಮುದಾಯದಿಂದ ಸಾಮೂಹಿಕವಾಗಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಮಣಿಕಂಠ ರಾಠೋಡ್ ತನ್ನ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಸ್ಲಿಂ ಸಮುದಾಯವನ್ನು ಬೇರು ಸಮೇತ ಕಿತ್ತೊಗೆಯಬೇಕು. 8 ದಿವಸಗಳ ಒಳಗಾಗಿ ʼಲವ್‌ ಜಿಹಾದ್ʼ ಆರೋಪಿಗಳನ್ನು ಸಾಯಿಸಬೇಕು ಎಂದು ಮಾತನಾಡಿರುವ ವಿಡಿಯೋ ವೈರಲ್ ಆಗಿರುವ ಬೆನ್ನಲ್ಲೇ ಶನಿವಾರ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೊದಲ ಎಫ್ಐಆರ್ ನಂತರ ಈಗ ಶಹಾಬಾದ್ ಪೊಲೀಸ್ ಠಾಣೆಯಯಲ್ಲಿ ರವಿವಾರ ಮತ್ತೊಂದು ಪ್ರಕರಣ ದಾಖಲಾಗಿದೆ.

ಶಹಾಬಾದ್ ನಿವಾಸಿ ಮುಹಮ್ಮದ್ ಮಸ್ತಾನ್ ದೂರು ನೀಡಿದ ಮೇರೆಗೆ ಕೋಮು ಸೌಹಾರ್ದತೆ ಕೆಡಿಸಲು ಪ್ರಯತ್ನಿಸಿದ್ದು, ಕೋಮು ಗಲಭೆಗೆ ಪ್ರಚೋದನೆ ನೀಡಿರುವ ಆರೋಪದಲ್ಲಿ ಮಣಿಕಂಠ ರಾಠೋಡ್ ವಿರುದ್ಧ ಶಹಾಬಾದ್ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಕೋಮು ಗಲಭೆಗೆ ಪ್ರಚೋದನೆ ನೀಡಿರುವ ಆರೋಪದಲ್ಲಿ ಮಣಿಕಂಠ ರಾಠೋಡ್ ವಿರುದ್ಧ ಇದು ಎರಡನೇ ಪ್ರಕರಣ ದಾಖಲಾಗಿದ್ದು, ಈವರೆಗೆ ಪೊಲೀಸರು ಆತನನ್ನು ಬಂಧಿಸದಿರುವುದು ಮುಸ್ಲಿಂ ಸಮುದಾಯದ ಮತ್ತು ಪ್ರಗತಿಪರ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಸಚಿವ ಪ್ರಿಯಾಂಕ್ ಖರ್ಗೆಗೆ ನಿಂದನೆ ಮಾಡಿರುವ ಆರೋಪದ ಮೇರೆಗೆ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...