ಕಲಬುರಗಿ| ಕೊಲೆ ಮಾಡಿ ಅಯೋಧ್ಯೆಗೆ ತೆರಳಿದ್ದ ಆರೋಪಿ ಸೇರಿ 10 ಮಂದಿಯ ಬಂಧನ: ಎಸ್ಪಿ ಅಡ್ಡೂರು ಶ್ರೀನಿವಾಸಲು

Date:

Share post:

ಕಲಬುರಗಿ: ಆಳಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜನವರಿ ಕೊನೆಯ ವಾರದಂದು ನಡೆದಿದ್ದ ಕೊಲೆ ಪ್ರಕರಣವನ್ನು 4 ತಿಂಗಳ ಬಳಿಕ ಒಟ್ಟು 10 ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ತಿಳಿಸಿದ್ದಾರೆ.

ನಗರದ ಜಿಲ್ಲಾ ಪೊಲೀಸ್ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಳಂದ ತಾಲ್ಲೂಕಿನ ಖಜೂರಿ ಗ್ರಾಮದ ರಾಹುಲ್ ಖಜೂರೆ(28) ಕಾಣೆಯಾಗಿದ್ದಾನೆಂದು ಅವರ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಮೇರೆಗೆ ಪ್ರಕರಣವನ್ನು ಭೇದಿಸಿದ ಪೊಲೀಸರು, ಕಾಣೆಯಾಗಿರುವವನು ಕೊಲೆಯಾಗಿ ಆತನ ಶವ ಮಹಾರಾಷ್ಟ್ರದ ಉಮರ್ಗಾ ತಾಲ್ಲೂಕಿನ ಬೆಡಗಾ ಸಮೀಪದ ಬೆಣ್ಣೆತೋರಾ ಡ್ಯಾಮಿನಲ್ಲಿ ಬಿಸಾಡಿದ ಬಗ್ಗೆ ತಿಳಿದುಬರುತ್ತದೆ. ಕ್ರಮೇಣ ತನಿಖೆ ನಡೆಸಿ, ಕೆಲವರನ್ನು ತನಿಖೆಗೆ ಒಳಪಡಿಸಿದಾಗ ಆರೋಪಿಗಳ ಹಿನ್ನೆಲೆ ಗುರುತಿಸಲಾಗಿದೆ. ನಿರಂತರ ಕಾರ್ಯಾಚರಣೆಯಿಂದ ಆರೋಪಿತರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ತನಿಖಾ ಯಶಸ್ವಿಯಾಗಿದೆ ಎಂದರು.

ಅನೂರು ಗ್ರಾಮದ ಪೃಥ್ವಿರಾಜ್ ಹರಿಪ್ರಸಾದ್ ಚಿಟಂಪಲ್ಲೇ, ಭಾಗ್ಯವಂತಿ ಹರಿಪ್ರಸಾದ್ ಚಿಟಂಪಲ್ಲೇ, ಸೀತಾಬಾಯಿ ಗಂಡ ಹರಿಪ್ರಸಾದ್ ಚಿಟಂಪಲ್ಲೇ, ಪವನ್ ರಜಪೂತ್ ಓರ್ವ ಕಾನೂನು ಸಂಘರ್ಷಕ್ಕೆ ಒಳಗಾದವ ಸೇರಿದಂತೆ ಐವರು ಪ್ರಮುಖ ಆರೋಪಿಗಳಾಗಿದ್ದಾರೆ. ಉಳಿದವರು ಶ್ರೀಧರ್, ಸಂದೀಪ್, ಸತ್ಯಭಾಮ, ಸರಸ್ವತಿ ಮತ್ತು ಮಹಾದೇವ ಎಂಬಾತರು ಪ್ರಮುಖ ಆರೋಪಿಗಳಿಗೆ ದುಡ್ಡು ಕೊಡುವುದು, ಬೇರೆ ಬೇರೆ ಸ್ಥಳಗಳಿಗೆ ಪಲಾಯನ ಮಾಡುವುದಕ್ಕೆ ಸಹಕಾರ ನೀಡಿದ್ದವರು ಆಗಿದ್ದಾರೆ ಎಂದು ಮಾಹಿತಿ ನೀಡಿದರು.

ಕೊಲೆ ಮಾಡಿ ಕಾಶಿ, ಅಯೋಧ್ಯೆ, ಪಂಢರಾಪುರ ಪ್ರವಾಸಕ್ಕೆ ತೆರಳಿದ ಆರೋಪಿಗಳು:

ಜನವರಿ ಕೊನೆಯ ವಾರದಲ್ಲಿ ಪ್ರಮುಖ ಆರೋಪಿಗಳು, ರಾಹುಲ್ ಖಜೂರೆ ಎಂಬಾತನನ್ನು ಪುಸಲಾಯಿಸಿ ಕರೆಸಿಕೊಂಡು ಆತನನ್ನು ಕೊಲೆ ಮಾಡಿ ಆತನ ಹೊಟ್ಟೆಗೆ ಹಗ್ಗದಿಂದ ದೊಡ್ಡ ಕಲ್ಲನ್ನು ಕಟ್ಟಿ ಉಮರ್ಗಾ ತಾಲ್ಲೂಕಿನ ಬೆಡಗಾ ಸಮೀಪದ ಬೆಣ್ಣೆತೋರಾ ಡ್ಯಾಮಿನಲ್ಲಿ ಬಿಸಾಕಿದ್ದಾರೆ. ಬಳಿಕ ಪ್ರಮುಖ ಆರೋಪಿ ಪೃಥ್ವಿರಾಜ್ ಹರಿಪ್ರಸಾದ್ ಚಿಟಂಪಲ್ಲೇ ಅಯೋಧ್ಯೆಯ ಪ್ರಯಾಗರಾಜ್ ನ ಮಹಾಕುಂಭಮೇಳ, ಫಂಡರಾಪೂರ, ಕಾಶಿ ಮತ್ತಿತರ ಕ್ಷೇತ್ರಗಳಿಗೆ ಭೇಟಿ ನೀಡಿದ್ದಾನೆ. ಪರಾರಿಯಾಗಿದ್ದ ಪೃಥ್ವಿರಾಜ್ ನನ್ನು ಕೊನೆಗೂ ಪೊಲೀಸರು ಬಂಧಿಸಿ, ಬೈಕ್ ಒಂದನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎಎಸ್ಪಿ ಮಹೇಶ್ ಮೇಘನ್ನನವರ್, ಡಿವೈಎಸ್ಪಿ ಗೋಪಿ ಬಿ.ಆರ್, ಪಿಐ ಶಂಕರ್ ಕೊಡ್ಲಾ, ಸಂಜೀವ್ ರೆಡ್ಡಿ ಸೇರಿದಂತೆ ಮತ್ತಿತರರು ಇದ್ದರು.

 

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...