ಕಲಬುರಗಿ| ಗಂಗಾ ಕಲ್ಯಾಣ ಬಿಲ್ ಪಾಸ್ ಮಾಡುವುದಕ್ಕಾಗಿ 2 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಜೆಸ್ಕಾಂ ಅಧಿಕಾರಿ

Date:

Share post:

ಕಲಬುರಗಿ: ವಿದ್ಯುತ್ ಹೆಚ್ಚುವರಿ ಟಿಸಿ, ಲೈನ್ ಮೈಂಟೆನನ್ಸ್, ಹೊಸ ಟಿಸಿಗಳು ಮತ್ತು ಗಂಗಾ ಕಲ್ಯಾಣ ಯೋಜನೆಗಳ ಬಿಲ್ಲುಗಳು ಪಾಸ್ ಮಾಡೋದಕ್ಕೆ ಲಂಚಕ್ಕೆ ಬಿಡಿಕೆಟ್ಟಿದ್ದ ಜೆಸ್ಕಾಂ ಎಂಜಿನಿಯರ್ ಒಬ್ಬರು 2 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಬಿದ್ದಿರುವ ಘಟನೆ ಮಂಗಳವಾರ ನಡೆದಿದೆ.

ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿಯ (ಗು.ವಿ.ಸ.ಕಂ.ನಿ) ಗ್ರಾಮೀಣ ವಿಭಾಗ-2ರ ಕಾರ್ಯನಿರ್ವಾಹಕ ಅಭಿಯಂತರ ಶೇಖರ್ ಬಹುರೂಪಿ ಎಂಬಾತರೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಅಧಿಕಾರಿ ಎಂದು ತಿಳಿದುಬಂದಿದೆ.

ಜೇವರ್ಗಿಯ ಕಾಂಟ್ರಾಕ್ಟರ್ ಸಾಯಬಣ್ಣ ಪೂಜಾರಿ ಲೋಕಾಯುಕ್ತಕ್ಕೆ ದೂರು ನೀಡಿದ ಮೇರೆಗೆ ಲೋಕಾಯುಕ್ತ ಪೊಲೀಸರು ಪ್ರತ್ಯೇಕ ತಂಡವನ್ನು ರಚಿಸಿ ಚುರುಕು ಕಾರ್ಯಾಚರಣೆಯಲ್ಲಿ ಆರೋಪಿ ಎಂಜಿನಿಯರ್ ಶೇಖರ್ ಅವರನ್ನು ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ರೆಡ್ ಹ್ಯಾಂಡ್ ನಲ್ಲಿ ಸೆರೆ ಹಿಡಿದಿದ್ದಾರೆ.

ಲೋಕಾಯುಕ್ತ ಎಸ್ಪಿ ಬಿಕೆ. ಉಮೇಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೀತಾ ಬೆನಾಳ ಅವರ ನೇತೃತ್ವದ ತಂಡದಲ್ಲಿ ದಾಳಿ ನಡೆಸಲಾಗಿದೆ. ತಂಡದಲ್ಲಿ ಪೊಲೀಸ್ ಸಿಬ್ಬಂದಿಯವರಾದ ಬಸವರಾಜ್, ಎಂ. ಜಿ. ರಾಣುಜಿ, ಪ್ರದೀಪ್, ಹಣಮಂತ, ವಸಂತ್ ಮತ್ತಿತರರು ಇದ್ದರು.

Share post:

spot_imgspot_img

Popular

More like this
Related

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...