ಕಲಬುರಗಿ | ಖಾಸಗಿ ಶಾಲೆಗಳಿಂದ ಡೊನೇಷನ್ ಹಾವಳಿ ತಪ್ಪಿಸಲು ಆಗ್ರಹ

Date:

Share post:

ಕಲಬುರಗಿ:  ಖಾಸಗಿ ಶಾಲೆಗಳ ಅವೈಜ್ಞಾನಿಕ ಡೊನೇಷನ್ ಹಾಗೂ ಶುಲ್ಕ ವಸೂಲಿ ತಡೆಯುವ ಮೂಲಕ ಸರಕಾರಿ ಶಾಲೆಗಳ ರಕ್ಷಣೆಯ ಜೊತೆಗೆ ಪೋಷಕರ ಹಿತರಕ್ಷಣೆಗೆ ಆಗ್ರಹಿಸಿ ಲೋಕ ರಕ್ಷಕ್ ಅಧ್ಯಕ್ಷರಾದ ದಯಾನಂದ ಯಂಕಚಿ ಅವರ ನೇತೃತ್ವದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ  ಸೂರ್ಯಕಾಂತ್ ಮದನೆ ಅವರಿಗೆ ಮನವಿ ಸಲ್ಲಿಸಿದರು.

ಖಾಸಗಿ ಶಾಲೆಗಳು ದಿನೇದಿನೆ ಪ್ರತಿಷ್ಠೆಯ ಮಾನದಂಡ ಎಂಬಂತೆ ಪೋಷಕರಿಂದ ಲಕ್ಷಾಂತರ ರೂ. ಡೊನೇಷನ್ ಹಾಗೂ ಶಾಲಾ ಶುಲ್ಕ ಸುಲಿಯುವುದನ್ನು ರೂಢಿಸಿಕೊಂಡಿವೆ. ಗ್ರಾಮೀಣ ಭಾಗ ಒಳಗೊಂಡಂತೆ ಎಲ್ಲಾ ಸರ್ಕಾರಿ ಶಾಲೆಗಳ ಪಕ್ಕದಲ್ಲೇ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಸ್ವತಃ ರಾಜ್ಯ ಸರ್ಕಾರವೇ ಮುಕ್ತವಾಗಿ ಅನುಮತಿ ನೀಡುತ್ತಿರುವುದು, ಸರ್ಕಾರಿ ಶಾಲೆಗಳು ಪೋಷಕರ ದೃಷ್ಟಿಯಲ್ಲಿ ತಮ್ಮ ಅಸ್ತಿತ್ವ ಕಳೆದುಕೊಳ್ಳುವಂತಾಗಿವೆ. ಇದನ್ನು ಬಂಡವಾಳ ಮಾಡಿಕೊಂಡಂತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಲಕ್ಷಗಟ್ಟಲೇ ಡೊನೇಷನ್ ಹಾಗೂ ಅವೈಜ್ಞಾನಿಕವಾಗಿ ಶಾಲಾ ಶುಲ್ಕ ಸುಲಿಯುವುದನ್ನು ಅಕ್ಷರಶಃ ಸಂಪ್ರದಾಯ ಎನ್ನುವಂತೆ ಪಾಲಿಸುತ್ತಾ ಹೊರಟಿವೆ ಎಂದು ಆಸಮಧಾನ ವ್ಯಕ್ತಪಡಿಸಿದರು.

ಖಾಸಗಿ ಶಾಲೆಗಳಲ್ಲಿ ಪಠ್ಯ ಪುಸ್ತಕಗಳು ಹಾಗೂ ನೋಟ್ಬುಕ್, ಶಾಲಾ ಬ್ಯಾಗು ನೀಡುವ ಹೆಸರಿನಲ್ಲಿ ಪೋಷಕರನ್ನು ಸುಲಿಯಲಾಗುತ್ತಿದೆ. ಇಷ್ಟೆಲ್ಲಾ ಬಹಿರಂಗವಾಗಿ ಅಕ್ರಮ ಚಟುವಟಿಕೆಗಳು ಖಾಸಗಿ ಶಾಲೆಗಳಿಂದ ನಡೆಯುತ್ತಿದ್ದಾಗ್ಯೂ ಈ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಈವರೆಗೆ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಂಡಿರುವ ಬಗ್ಗೆ ನಿದರ್ಶನಗಳೇ ಇಲ್ಲ.

 

ಎಲ್ಲ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್ ಸಂಗ್ರಹ ವರದಿ ಹಾಗೂ ಶಾಲಾ ಶುಲ್ಕ ವಸೂಲಾತಿಯ ವಿವರಗಳನ್ನು ಪಡೆದು, ಈ ನಿಟ್ಟಿನಲ್ಲಿ ಲೋಪ ಎಸಗಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು. ಶಿಕ್ಷಣ ಇಲಾಖೆಯ ಅಧಿಕೃತ ಜಾಲತಾಣದಲ್ಲಿ (ವೆಬ್ಸೈಟ್) ಸಮಗ್ರ ಮಾಹಿತಿ ಅಪ್ ಲೋಡ್ ಮಾಡುವ ಮೂಲಕ ಅಮಾಯಕ ಪೋಷಕರ ಹಿತ ಕಾಯಬೇಕೆಂದು ಮನವಿಯಲ್ಲಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ  ಶರಣು ಕಲಶೆಟ್ಟಿ, ನಿರಂಜನ್ ಜಹಾಗಿರ್ದಾರ್, ಶ್ರೀಶೈಲ್ ಸೊರಡೆ, ಲಕ್ಷ್ಮಿಕಾಂತ್ ಜೋಳದ, ರಾಜಕುಮಾರ ಭಜಂತ್ರಿ, ಸರ್ವೇಶ್ ವಠರ, ಸಾಜೀದ್ ಅಹ್ಮದ್, ಮಲ್ಲಿನಾಥ್ ಪಾಟೀಲ್, ಸಂದೀಪ್ ರಾಠೋಡ್, ಕಿರಣ್ ಕಾವೇಟಿ, ಪ್ರಮೋದ್ ಚೌದರಿ, ಅಭಿಲಾಷ್ ಪಾಟೀಲ್, ಶಿವಾನಂದ ಬೆಳಮಗಿ, ದಿನೇಶ್ ಜೇವರ್ಗಿ, ಸಿದ್ದು ಸೋನಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...