ಕಲಬುರಗಿ| ಶಾದಿಪುರ ಗ್ರಾಮ ಘಟಕಕ್ಕೆ ಕರವೇ ಸ್ವಾಭಿಮಾನಿ ಸೇನೆಯ ನೂತನ ಪದಾಧಿಕಾರಿಗಳ ಆಯ್ಕೆ

Date:

Share post:

ಕಲಬುರಗಿ: ಚಿಂಚೋಳಿ ತಾಲೂಕಿನ ಶಾದಿಪುರ ಗ್ರಾಮ ಘಟಕಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸ್ವಾಭಿಮಾನಿ ಸೇನೆಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಮೂಲಕ ಸಂಘಟನೆಯನ್ನು ಬಲಪಡಿಸುವ ಮಹತ್ವದ ಹೆಜ್ಜೆ ಇಡಲಾಗಿದೆ ಎಂದು ಸೇನೆಯ ತಾಲ್ಲೂಕು ಅಧ್ಯಕ್ಷ ಲಿಂಬಾಜಿ ಚವ್ಹಾಣ್ ಹೇಳಿದ್ದಾರೆ.

ಗ್ರಾಮ ಮಾಧ್ಯಮ ಘಟಕದ ಅಧ್ಯಕ್ಷರಾಗಿ ರಮೇಶ್ ಬಿಲಾಲ್‌ಪುರ್, ಚಿಂಚೋಳಿ ತಾಲೂಕು ವಿದ್ಯಾರ್ಥಿ ಘಟಕದ ಅಧ್ಯಕ್ಷರಾಗಿ ಸಚಿನ್ ಚವ್ಹಾಣ್ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿ ಸಮುದಾಯದ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಸಂಘಟಿಸಲು ಸಚಿನ್ ಚವ್ಹಾಣ್ ಮುಂದಾಗಲಿದ್ದಾರೆ ಎಂದು ಹೇಳಿದರು.

ಶಾದಿಪುರ ಗ್ರಾಮ ಘಟಕದ ಒಟ್ಟಾರೆ ನಾಯಕತ್ವದ ಹೊಣೆಗಾರಿಕೆಯನ್ನು ಅಮೋಲ್ ಜಿ. ಮಾನೆ ಅವರಿಗೆ ನೀಡಲಾಗಿದೆ. ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಘಟಕವು ಸಕ್ರಿಯವಾಗಿ ಕಾರ್ಯನಿರ್ವಹಿಸಿ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದನೆ ನೀಡುವ ನಿರೀಕ್ಷೆಯಿದೆ. ಈ ತಂಡದೊಂದಿಗೆ ಕಾರ್ಯನಿರ್ವಹಿಸಲು ಹಲವಾರು ಸಮರ್ಥ ಪದಾಧಿಕಾರಿಗಳನ್ನು ಸಹ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಗ್ರಾಮದ ಕೃಷ್ಣ ಕಲ್ವಾ, ಬಳಿರಾಮ್ ಪ್ರಾಂಜೆ, ನಿಲೇಶ್ ಪ್ರಾಂಜೆ, ನಿಲಪ್ಪ ದಸ್ತಾಪುರ, ಶಾಂತಕುಮಾರ್ ಕನ್ಕಟ್, ಮಡಲರಾಜ್ ಮಡಿವಾಳ, ನವೀನ್ ಪ್ರಾಂಜೆ, ನರಸಿಂಹ ಹಡಪದ್, ಅಲ್ತಾಬ್ ಶೇಖ್, ಯಲ್ಲಪ್ಪ ಆರ್. ಪೂಜಾರಿ, ಮನು ಚವ್ಹಾಣ್ ಅವರನ್ನು ಆಯ್ಕೆ ಮಾಡಿ ಆದೇಶ ಪತ್ರ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸೇನೆಯ ಪದಾಧಿಕಾರಿಗಳು ಮತ್ತಿತರರು ಹಾಜರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...