ಕಲಬುರಗಿ| ಆರ್.ಸಿ.ಬಿ ಅಭಿಮಾನಿಗಳ ಸಾವಿಗೆ ಸರಕಾರ ನೈತಿಕ ಹೊಣೆಯಾಗಲಿ: ಆನಂದ ತೆಗನೂರ

Date:

Share post:

ಕಲಬುರಗಿ: ಕಾಂಗ್ರೆಸ್‌ ಸರ್ಕಾರದ ಅವ್ಯವಸ್ಥೆಯಿಂದಾಗಿ ಹಲವಾರು ಅಮಾಯಕ ಆರ್.ಸಿ.ಬಿ ಅಭಿಮಾನಿಗಳ ಸಾವಾಗಿದೆ. ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವುದು ನಿಜಕ್ಕೂ ದುರಂತದ ವಿಷಯ. ಇಂತಹ ಘೋರ ಘಟನೆ ಸರಕಾರವೇ ನೈತಿಕ ಹೊಣೆಯಾಗಲಿ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ವಕ್ತಾರ ಆನಂದ ತೆಗನೂರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಿಂದ ಅನೇಕರು ಮೃತಪಟ್ಟ ಘಟನೆ ಅತ್ಯಂತ ನೋವು ತರಿಸಿದೆ. ಈ ರೀತಿಯ ದೊಡ್ಡ ಉತ್ಸವವನ್ನು ನಿರ್ವಹಣೆ ಮಾಡುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ದೊಡ್ಡ ಪ್ರಮಾಣದಲ್ಲಿ ಸಂಭ್ರಮಾಚರಣೆ ನಡೆಯುತ್ತದೆ ಎಂದು ಗೊತ್ತಿದ್ದರೂ ಕೂಡ ರಾಜ್ಯ ಸರ್ಕಾರವು ಸರಿಯಾದ ರೂಪುರೇಷ ಹಾಗೂ ತಯಾರಿ ಮಾಡಿಕೊಳ್ಳದೇ ಇರುವುದು ಇಂತಹ ದುರಂತಕ್ಕೆ ಕಾರಣವಾಗಿದೆ. ನಿರೀಕ್ಷಿತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೆ ಅನಾಹುತ ಸಂಭವಿಸುತ್ತಿರಲಿಲ್ಲ. ಆರ್‌ಸಿಬಿ ಜಯದ ಬಳಿಕ ನಾಡಿನಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು, ಮುನ್ನೆಚ್ಚರಿಕೆ ವಹಿಸಿದ್ದರೆ ಸಂಭ್ರಮದ ವೇಳೆ ದುರಂತವನ್ನು ತಪ್ಪಿಸ ಬಹುದಾಗಿತ್ತು ಎಂದು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...