ಕಲಬುರಗಿ| ಆರ್.ಸಿ.ಬಿ ಅಭಿಮಾನಿಗಳ ಸಾವಿಗೆ ಸರಕಾರ ನೈತಿಕ ಹೊಣೆಯಾಗಲಿ: ಆನಂದ ತೆಗನೂರ

Date:

Share post:

ಕಲಬುರಗಿ: ಕಾಂಗ್ರೆಸ್‌ ಸರ್ಕಾರದ ಅವ್ಯವಸ್ಥೆಯಿಂದಾಗಿ ಹಲವಾರು ಅಮಾಯಕ ಆರ್.ಸಿ.ಬಿ ಅಭಿಮಾನಿಗಳ ಸಾವಾಗಿದೆ. ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವುದು ನಿಜಕ್ಕೂ ದುರಂತದ ವಿಷಯ. ಇಂತಹ ಘೋರ ಘಟನೆ ಸರಕಾರವೇ ನೈತಿಕ ಹೊಣೆಯಾಗಲಿ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ವಕ್ತಾರ ಆನಂದ ತೆಗನೂರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಿಂದ ಅನೇಕರು ಮೃತಪಟ್ಟ ಘಟನೆ ಅತ್ಯಂತ ನೋವು ತರಿಸಿದೆ. ಈ ರೀತಿಯ ದೊಡ್ಡ ಉತ್ಸವವನ್ನು ನಿರ್ವಹಣೆ ಮಾಡುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ದೊಡ್ಡ ಪ್ರಮಾಣದಲ್ಲಿ ಸಂಭ್ರಮಾಚರಣೆ ನಡೆಯುತ್ತದೆ ಎಂದು ಗೊತ್ತಿದ್ದರೂ ಕೂಡ ರಾಜ್ಯ ಸರ್ಕಾರವು ಸರಿಯಾದ ರೂಪುರೇಷ ಹಾಗೂ ತಯಾರಿ ಮಾಡಿಕೊಳ್ಳದೇ ಇರುವುದು ಇಂತಹ ದುರಂತಕ್ಕೆ ಕಾರಣವಾಗಿದೆ. ನಿರೀಕ್ಷಿತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೆ ಅನಾಹುತ ಸಂಭವಿಸುತ್ತಿರಲಿಲ್ಲ. ಆರ್‌ಸಿಬಿ ಜಯದ ಬಳಿಕ ನಾಡಿನಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು, ಮುನ್ನೆಚ್ಚರಿಕೆ ವಹಿಸಿದ್ದರೆ ಸಂಭ್ರಮದ ವೇಳೆ ದುರಂತವನ್ನು ತಪ್ಪಿಸ ಬಹುದಾಗಿತ್ತು ಎಂದು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...