ಕಲಬುರಗಿ| ಖ್ಯಾತ ಚಿತ್ರ ಕಲಾವಿದರಿಗೆ ಅಭಿನಂದನಾ ಸಮಾರಂಭ 

Date:

Share post:

ಕಲಬುರಗಿ: ನಗರದಲ್ಲಿ ಮುಹಿಬನ್ನೆ ಉರ್ದು ಆಯೋಜಿಸಿದ್ದ ಕರ್ನಾಟಕ ಲಲಿತಕಲಾ ಅಕಾಡೆಮಿ ರಾಜ್ಯ ವಾರ್ಷಿಕ ಪ್ರಶಸ್ತಿ ಪುರಸ್ಕೃತ ರೆಹಮಾನ್ ಪಟೇಲ್ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ಅಯಾಜುದ್ದೀನ್ ಪಟೇಲ್ ಅವರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು.

ಈ ವೇಳೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಫರಾನ್ ಎಜುಕೇಶನ್ ಸೊಸೈಟಿಯ ಸಂಸ್ಥಾಪಕ ಅಧ್ಯಕ್ಷ ಅಬ್ದುಲ್ ಹಮೀದ್ ಮಾತನಾಡಿ, ಇಂದಿನ ಸಮಾಜದಲ್ಲಿ ಕಲಾವಿದರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.

ಕಲಾವಿದರಿಂದ ಮುಂದಿನ ಪೀಳಿಗೆಗೆ ಇತಿಹಾಸ, ಕಲೆ, ಸಾಂಸ್ಕೃತಿಕ ಸೇರಿದಂತೆ ಇತರೆ ವಿಷಯಗಳನ್ನು ಪರಿಚಯಿಸುವ ದೊಡ್ಡ ಕಾರ್ಯ ಆಗಲಿದೆ ಎಂದರು.

ಮುಹಿಬನ್ನೆ ಉರ್ದು ಅಧ್ಯಕ್ಷ ಡಾ.ಫಹೀಮುದ್ದೀನ್ ಪೀರಜಾದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಡಾ ಅನೀಸ್ ಸಿದ್ದಿಕಿ, ಸದಸ್ಯ ಖಾಜಾ ಪಾಷಾ ಇನಾಮದಾರ ವೇದಿಕೆ ಹಂಚಿಕೊಂಡರು. ಸೈಯದ್ ತಯಾಬ್ ಅಲಿ, ಗಜಾನ್‌ಫರ್ ಇಕ್ಬಾಲ್, ರಿಜ್ವಾನ್ ಉರ್ ರೆಹಮಾನ್, ಮುಜೀಬ್ ಅಲಿ ಖಾನ್, ಯೂಸುಫ್, ಮುಬೀನ್ ಝಕಾಮ್ ಸೇರಿದಂತೆ ಮುಂತಾದ ಉರ್ದು ಬರಹಗಾರರು ಮತ್ತು ಬುದ್ಧಿಜೀವಿಗಳು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...