ಕಲಬುರಗಿ| ಚಿಂಚೋಳಿ ಗಡಿಭಾಗದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ

Date:

Share post:

ಕಲಬುರಗಿ: ಚಿಂಚೋಳಿ ತಾಲೂಕಿನ ಗಡಿಭಾಗವನ್ನು ಶೈಕ್ಷಣಿಕವಾಗಿ ಅಭಿವೃದ್ಧಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ಚಿಂಚೋಳಿ ಶಾಸಕ ಅವಿನಾಶ್ ಜಾಧವ್ ಅವರಿಗೆ ಮನವಿ ಸಲ್ಲಿಸಿ, ಒತ್ತಾಯಿಸಲಾಯಿತು.

ಚಿಂಚೋಳಿ ತಾಲೂಕಿನ ತೆಲಂಗಾಣ ಗಡಿಭಾಗದ ಅಂಚಿಗೆ ಇರುವ ಶಾದಿಪೂರ ಮತ್ತು ಕುಂಚಾವರಂ ಗ್ರಾಮಗಳು ಅಭಿವೃದ್ಧಿಯಿಂದ ವಂಚಿತಗೊಂಡಿದ್ದು, ಈ ಭಾಗದ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ಕುಂಟಿತಗೊಳ್ಳುತ್ತಿರುವ ಶೈಕ್ಷಣಿಕ ಗುಣಮಟ್ಟ ಸುಧಾರಣಗೆ ತರಲು ಕ್ರಮವಹಿಸಬೇಕೆಂದು ಆಗ್ರಹಿಸಿದರು.

ಶಾದಿಪೂರ್ ಪಂಚಾಯತ್, ಕುಂಚಾರಾಮ ಪಂಚಾಯತ್ ವೆಂಕಟಾಪುರ ಪಂಚಾಯತ್ ನಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ಸರಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಬೇಕು, ಹೊಸ ಬಸ್ ನಿಲ್ದಾಣ ನಿರ್ಮಾಣ, ಶಾದಿಪೂರ ಕೆರೆ ದುರಸ್ತಿ ಕಾಮಗಾರಿಗೆ ಚಾಲನೆ ನೀಡುವುದು, ಚಾಪ್ಲಾನಾಯಕ ತಾಂಡಾದಲ್ಲಿನ ಸಿಸಿ ರಸ್ತೆ ನಿರ್ಮಾಣಕ್ಕೆ ಕ್ರಮ, ಶಾದಿಪೂರ, ಕುಂಚಾರಾಮ್ ಮತ್ತು ವೆಂಕಟಾಪುರ್ ಗ್ರಾಮ ಪಂಚಾಯತಿ ಕಾರ್ಯಾಲಯ ಸಿಬ್ಬಂದಿಗಳು ಸಮಯಕ್ಕೆ ಕಾರ್ಯಾಲಯಕ್ಕೆ ಬಂದು ಜನ ಸಾಮಾನ್ಯರಿಗೆ ಸರಕಾರಿ ಸೇವೆ ನೀಡಲು ಕ್ರಮಕೈಗೊಳಬೇಕು ಎಂದು ಒತ್ತಾಯಿಸಿ, ಕರವೇ ಸ್ವಾಭಿಮಾನಿ ಸೇನೆಯ ಪದಾಧಿಕಾರಿಗಳು ಶಾಸಕರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸೇನೆಯ ತಾಲೂಕಾಧ್ಯಕ್ಷ ಲಿಂಬಾಜಿ ಚವ್ಹಾಣ್, ಪಾಂಡು ಜಾಧವ, ಪ್ರಭು ಗೌಡ, ಲಿಂಬು ಸಿ ರಾಠೋಡ್, ಸಂತೋಷ ರಾಠೋಡ್, ಮೋಹನ್ ಚವಾಣ್, ಸಂಜು ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...