ಕಲಬುರಗಿ| ಚಿಂಚೋಳಿ ಗಡಿಭಾಗದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ

Date:

Share post:

ಕಲಬುರಗಿ: ಚಿಂಚೋಳಿ ತಾಲೂಕಿನ ಗಡಿಭಾಗವನ್ನು ಶೈಕ್ಷಣಿಕವಾಗಿ ಅಭಿವೃದ್ಧಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ಚಿಂಚೋಳಿ ಶಾಸಕ ಅವಿನಾಶ್ ಜಾಧವ್ ಅವರಿಗೆ ಮನವಿ ಸಲ್ಲಿಸಿ, ಒತ್ತಾಯಿಸಲಾಯಿತು.

ಚಿಂಚೋಳಿ ತಾಲೂಕಿನ ತೆಲಂಗಾಣ ಗಡಿಭಾಗದ ಅಂಚಿಗೆ ಇರುವ ಶಾದಿಪೂರ ಮತ್ತು ಕುಂಚಾವರಂ ಗ್ರಾಮಗಳು ಅಭಿವೃದ್ಧಿಯಿಂದ ವಂಚಿತಗೊಂಡಿದ್ದು, ಈ ಭಾಗದ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ಕುಂಟಿತಗೊಳ್ಳುತ್ತಿರುವ ಶೈಕ್ಷಣಿಕ ಗುಣಮಟ್ಟ ಸುಧಾರಣಗೆ ತರಲು ಕ್ರಮವಹಿಸಬೇಕೆಂದು ಆಗ್ರಹಿಸಿದರು.

ಶಾದಿಪೂರ್ ಪಂಚಾಯತ್, ಕುಂಚಾರಾಮ ಪಂಚಾಯತ್ ವೆಂಕಟಾಪುರ ಪಂಚಾಯತ್ ನಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ಸರಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಬೇಕು, ಹೊಸ ಬಸ್ ನಿಲ್ದಾಣ ನಿರ್ಮಾಣ, ಶಾದಿಪೂರ ಕೆರೆ ದುರಸ್ತಿ ಕಾಮಗಾರಿಗೆ ಚಾಲನೆ ನೀಡುವುದು, ಚಾಪ್ಲಾನಾಯಕ ತಾಂಡಾದಲ್ಲಿನ ಸಿಸಿ ರಸ್ತೆ ನಿರ್ಮಾಣಕ್ಕೆ ಕ್ರಮ, ಶಾದಿಪೂರ, ಕುಂಚಾರಾಮ್ ಮತ್ತು ವೆಂಕಟಾಪುರ್ ಗ್ರಾಮ ಪಂಚಾಯತಿ ಕಾರ್ಯಾಲಯ ಸಿಬ್ಬಂದಿಗಳು ಸಮಯಕ್ಕೆ ಕಾರ್ಯಾಲಯಕ್ಕೆ ಬಂದು ಜನ ಸಾಮಾನ್ಯರಿಗೆ ಸರಕಾರಿ ಸೇವೆ ನೀಡಲು ಕ್ರಮಕೈಗೊಳಬೇಕು ಎಂದು ಒತ್ತಾಯಿಸಿ, ಕರವೇ ಸ್ವಾಭಿಮಾನಿ ಸೇನೆಯ ಪದಾಧಿಕಾರಿಗಳು ಶಾಸಕರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸೇನೆಯ ತಾಲೂಕಾಧ್ಯಕ್ಷ ಲಿಂಬಾಜಿ ಚವ್ಹಾಣ್, ಪಾಂಡು ಜಾಧವ, ಪ್ರಭು ಗೌಡ, ಲಿಂಬು ಸಿ ರಾಠೋಡ್, ಸಂತೋಷ ರಾಠೋಡ್, ಮೋಹನ್ ಚವಾಣ್, ಸಂಜು ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...