ಕಲಬುರಗಿ| ವಿಮಾನ ದುರಂತ ಪ್ರಕರಣಕ್ಕೆ ಕೇಂದ್ರ ಸಚಿವ ರಾಜೀನಾಮೆ ಕೊಡಬೇಕು: ಖಂಡ್ರೆ 

Date:

Share post:

ಕಲಬುರಗಿ: ಅಹಮದಾಬಾದ್ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಸಚಿವ ರಾಜೀನಾಮೆ ಕೊಡಬೇಕು ಎಂದು ಸಚಿವ ಈಶ್ಚರ ಖಂಡ್ರೆ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಅವರು, ಈ ವಿಮಾನ ದುರಂತ ಘಟನೆಗೆ ಕೇಂದ್ರ ಸರ್ಕಾರ ಹೊಣೆಹೊತ್ತು ಕೂಡಲೇ ಕೇಂದ್ರ ವಿಮಾನಯಾನ ಸಚಿವ ರಾಜೀನಾಮೆ ನೀಡಬೇಕು.‌ ಇದು ಒಂದು ಅತಿದೊಡ್ಡ ದುರಂತವಾಗಿದೆ, ಅತ್ಯಂತ ನೋವಿನ ಸಂಗತಿಯಾಗಿದೆ.

ಇಂತಹ ದುರಂತ ನಡೆಯದಂತೆ ಸರ್ಕಾರ ಕ್ರಮ ಜರುಗಿಸಬೇಕು, ಹೀಗಾಗಿ ಈ ದುರಂತದ ಬಗ್ಗೆ ನಿಸ್ಪಕ್ಷಪಾತವಾಗಿ ತನಿಖೆಯಾಗಿ ಆ ವರದಿ ಜನರ ಮುಂದೆ ಇಡಬೇಕು ಎಂದರು.

ಇನ್ನೂ, ಟಾಟಾ ಗ್ರೂಪ್ ಸಮೂಹದಿಂದ 1 ಕೋಟಿ ಪರಿಹಾರ ಘೋಷಿಸಿದೆ ಆದರೆ ಆ ಪರಿವಾರದವರಿಗೆ ಏಷ್ಟು ಕೋಟಿ ಕೊಟ್ಟರು ಕಡಿಮೆಯೆ ಎಂದು ಹೇಳಿದರು.

ಕಾಲ್ತುಳಿತ ಪ್ರಕರಣಕ್ಕೆ ರಾಜೀನಾಮೆ ಕೊಡಬೇಕು ಎನ್ನುವ ಬಿಜೆಪಿಗರು ಆಗ್ರಹಕ್ಕೆ ಪ್ರತಿಕ್ರಿಯಿಸಿದ ಅವರು, ಕಾಲ್ತುಳಿತಕ್ಕೆ ರಾಜೀನಾಮೆ ಕೇಳುವವರು ಕುಂಭಮೇಳದಲ್ಲಿ ಘಟನೆ ಕುರಿತಾಗಿಯೂ ರಾಜೀನಾಮೆ ಕೇಳಬೇಕು, ಸಾವಿನಲ್ಲಿ ರಾಜಕೀಯ‌ ಮಾಡಬಾರದು ಎಂದರು.

Share post:

spot_imgspot_img

Popular

More like this
Related

ಕಲಬುರಗಿ: ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ಚರ್ಮ ಕ್ಯಾನ್ಸರ್ ಜಾಗೃತಿ ಶಿಬಿರ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಖ್ವಾಜಾ ಬಂದಾ ನವಾಜ್ ದರ್ಗಾದ 622ನೇ ಅದ್ಧೂರಿ ಸಂದಲ್ ಮೆರವಣಿಗೆ

ಕಲಬುರಗಿ, ಮೇ 3: ನಗರದ ಐತಿಹಾಸಿಕ ಹಾಗೂ ಧಾರ್ಮಿಕ ಕೇಂದ್ರ ಹಾಗೂ...

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ...

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...