ಕಲಬುರಗಿ| ವಿಮಾನ ದುರಂತ ಪ್ರಕರಣಕ್ಕೆ ಕೇಂದ್ರ ಸಚಿವ ರಾಜೀನಾಮೆ ಕೊಡಬೇಕು: ಖಂಡ್ರೆ 

Date:

Share post:

ಕಲಬುರಗಿ: ಅಹಮದಾಬಾದ್ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಸಚಿವ ರಾಜೀನಾಮೆ ಕೊಡಬೇಕು ಎಂದು ಸಚಿವ ಈಶ್ಚರ ಖಂಡ್ರೆ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಅವರು, ಈ ವಿಮಾನ ದುರಂತ ಘಟನೆಗೆ ಕೇಂದ್ರ ಸರ್ಕಾರ ಹೊಣೆಹೊತ್ತು ಕೂಡಲೇ ಕೇಂದ್ರ ವಿಮಾನಯಾನ ಸಚಿವ ರಾಜೀನಾಮೆ ನೀಡಬೇಕು.‌ ಇದು ಒಂದು ಅತಿದೊಡ್ಡ ದುರಂತವಾಗಿದೆ, ಅತ್ಯಂತ ನೋವಿನ ಸಂಗತಿಯಾಗಿದೆ.

ಇಂತಹ ದುರಂತ ನಡೆಯದಂತೆ ಸರ್ಕಾರ ಕ್ರಮ ಜರುಗಿಸಬೇಕು, ಹೀಗಾಗಿ ಈ ದುರಂತದ ಬಗ್ಗೆ ನಿಸ್ಪಕ್ಷಪಾತವಾಗಿ ತನಿಖೆಯಾಗಿ ಆ ವರದಿ ಜನರ ಮುಂದೆ ಇಡಬೇಕು ಎಂದರು.

ಇನ್ನೂ, ಟಾಟಾ ಗ್ರೂಪ್ ಸಮೂಹದಿಂದ 1 ಕೋಟಿ ಪರಿಹಾರ ಘೋಷಿಸಿದೆ ಆದರೆ ಆ ಪರಿವಾರದವರಿಗೆ ಏಷ್ಟು ಕೋಟಿ ಕೊಟ್ಟರು ಕಡಿಮೆಯೆ ಎಂದು ಹೇಳಿದರು.

ಕಾಲ್ತುಳಿತ ಪ್ರಕರಣಕ್ಕೆ ರಾಜೀನಾಮೆ ಕೊಡಬೇಕು ಎನ್ನುವ ಬಿಜೆಪಿಗರು ಆಗ್ರಹಕ್ಕೆ ಪ್ರತಿಕ್ರಿಯಿಸಿದ ಅವರು, ಕಾಲ್ತುಳಿತಕ್ಕೆ ರಾಜೀನಾಮೆ ಕೇಳುವವರು ಕುಂಭಮೇಳದಲ್ಲಿ ಘಟನೆ ಕುರಿತಾಗಿಯೂ ರಾಜೀನಾಮೆ ಕೇಳಬೇಕು, ಸಾವಿನಲ್ಲಿ ರಾಜಕೀಯ‌ ಮಾಡಬಾರದು ಎಂದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...