ಕಲಬುರಗಿ| ಪ್ರೊ.ಎ.ಎಚ್.ರಾಜಾಸಾಬ್ ಗೆ ಅಭಿನಂದನಾ ಸಮಾರಂಭ

Date:

Share post:

ಕಲಬುರಗಿ: ನಗರದ ಶ್ರೀ ವಿದ್ಯಾ ಪದವಿ ಪೂರ್ವ, ಪದವಿ ವಿಜ್ಞಾನ ಹಾಗೂ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಪ್ರೊ..ಎ.ಎಚ್.ರಾಜಾಸಾಬ್ ಅವರಿಗೆ ಅಭಿನಂದನಾ ಸಮಾರಂಭ ಜರುಗಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪ್ರೊ. ಎ.ಹೆಚ್ ರಾಜಸಾಬ್ ಅವರು, ವಿಜ್ಞಾನದ ಪ್ರಗತಿಯ ರಾಷ್ಟ್ರದ ಪ್ರಗತಿ ಒಂದು ರಾಷ್ಟ್ರದ ಅಭಿವೃದ್ಧಿ ವಿಜ್ಞಾನ ಕ್ಷೇತ್ರವನ್ನು ಅವಲಂಬಿಸಿದೆ, ವಿಜ್ಞಾನದ ಪ್ರಗತಿಯ ರಾಷ್ಟ್ರದ ಪ್ರಗತಿ ಎಂದು ಹೇಳಿದರು.

ರಾಜ್ಯದಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವುದರ ಜೊತೆಗೆ ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸುವುದು ಅತ್ಯಂತ ಮುಖ್ಯವಾಗಿದೆ. ಸಾಕಷ್ಟು ವಿಜ್ಞಾನ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದರೂ ಸಹ ಅಲ್ಲಲ್ಲಿ ಮೌಢ್ಯ ಕಂದಾಚಾರ ಪ್ರಕರಣಗಳು ಇನ್ನು ಜೀವಂತವಾಗಿರುವುದು ದುರಾದೃಷ್ಟಕರ ಎಂದು ಅಭಿಪ್ರಾಯಪಟ್ಟರು.

ರಾಜ್ಯದ ಜನರಲ್ಲಿ ವಿಜ್ಞಾನವನ್ನು ಪ್ರಚಾರ ಮಾಡಿ ವೈಜ್ಞಾನಿಕ ಬೆಳವಣಿಗೆಗೆ ಉತ್ತೇಜನ ನೀಡುವುದು ತುಂಬಾ ಅಗತ್ಯವಿದೆ ಎಂದರು.

ಗಿರೀಶ್ ಕಡ್ಲೆವಾಡ ಮಾತನಾಡಿ, ಮಣ್ಣು ನೀರು ಗಾಳಿ ಕಲುಷಿತಕೊಂಡಿದೆ, ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಲ್ಲರೂ ಸೇರಿ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು.

ವೇದಿಕೆ ಮೇಲೆ ಡಾ. ನರೇಂದ್ರ ಬಡಶೇಶಿ, ಡಾ. ಕವಿರಾಜ್ ಪಾಟೀಲ್ ಇದ್ದರು. ಕಾರ್ಯಕ್ರಮದಲ್ಲಿ ಡಾ. ಪ್ರಭಾ ಎಸ್ಎನ್, ಡಾ.ಗತಪ್ನಡಗಿ, ಸಂಗಮೇಶ್ ಹಿರೇಮಠ್, ಡಾ.ಸರಸ್ವತಿ, ಡಾ. ಲತಾ ಕರೆಕಲ್, ಡಾ. ಜಗನ್ನಾಥ್ ಡೆಂಗಿ, ಅಸ್ರ ಯಾಸ್ಮಿನ್, ಮಹೇಶ್ ದೆವಣಿ ಸೇರಿದಂತೆ ಮುಂತಾದ ಪ್ರಮುಖರು ಭಾಗವಹಿಸಿದ್ದರು. ಡಾ. ರಾಜು ಮೋದಿ ಸ್ವಾಗತಿಸಿದರು. ಮಾಣಿಕರಾವ ಸಕ್ಪಲ್ ನಿರ್ವಹಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...