ಕಲಬುರಗಿ| ಬೆಂಗಳೂರು-ಬೀದರ ನಡುವೆ ಹತ್ತು ಟ್ರಿಪ್‍ಗಳಲ್ಲಿ ವಿಶೇಷ ರೈಲು ಸಂಚಾರ

Date:

Share post:

ಕಲಬುರಗಿ: ಎಸ್‍ಎಮ್‍ವಿಟಿ (SMVT) ಬೆಂಗಳೂರು ಮತ್ತು ಬೀದರ್ ನಡುವೆ ವಿಶೇಷ ರೈಲು (ರೈಲು ಸಂಖ್ಯೆ 06539/06540) ಕೆಳಕಂಡ ದಿನಾಂಕಗಳಂದು 10 ಟ್ರಿಪ್‍ಗಳಲ್ಲಿ ಸಂಚರಿಸುತ್ತಿದ್ದು, ಈ ವಿಶೇಷ ರೈಲು ಕೇಂದ್ರ ರೈಲ್ವೆ ಸೋಲಾಪುರ ವಿಭಾಗದ ಕಲಬುರಗಿ, ಶಹಾಬಾದ್ ಹಾಗೂ ವಾಡಿ ರೈಲು ನಿಲ್ದಾಣಗಳಲ್ಲಿ ನಿಲ್ಲಲಿದೆ ಎಂದು ಕೇಂದ್ರ ರೈಲ್ವೆ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಸ್‍ಎಮ್‍ವಿಟಿ (SMVT) ಬೆಂಗಳೂರು-ಬೀದರ್ ವಿಶೇಷ ರೈಲುಗಳು (ರೈಲು ಸಂಖ್ಯೆ 06539) (5 ಟ್ರಿಪ್) ಪ್ರತಿ ಶುಕ್ರವಾರ ಮತ್ತು ಭಾನುವಾರ ಇದೇ ಜೂನ್ 15 ರಿಂದ 29 ರವರೆಗೆ ಎಸ್‍ಎಮ್‍ವಿಟಿ (SMVT) ಬೆಂಗಳೂರಿನಿಂದ ರಾತ್ರಿ 21:15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 10:15 ಕ್ಕೆ ಬೀದರಕ್ಕೆ ತಲುಪಲಿದೆ.

ವಿಶೇಷ ರೈಲು ಸಂಖ್ಯೆ 06540 (5 ಟ್ರಿಪ್) ಪ್ರತಿ ಶನಿವಾರ ಮತ್ತು ಸೋಮವಾರ ಇದೇ ಜೂನ್ 16 ರಿಂದ 30 ರವರೆಗೆ ಬೀದರ್‍ನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 4 ಗಂಟೆಗೆ ಎಸ್‍ಎಮ್‍ವಿಟಿ (SMVT) ಬೆಂಗಳೂರಿಗೆ ತಲುಪಲಿದೆ. ಈ ರೈಲು ಹುಮನಾಬಾದ್, ಕಲಬುರಗಿ, ಶಹಾಬಾದ್, ವಾಡಿ, ಯಾದಗಿರಿ, ಕೃಷ್ಣ, ರಾಯಚೂರು, ಮಂಥ್ರಾಲಯಂ ರಸ್ತೆ, ಅದೋನಿ, ಗುಂಟಕಲ್, ಅನಂತಪುರ, ಧರ್ಮಾವರಂ, ಹಿಂದೂಪುರ ಮತ್ತು ಯಲಹಂಕದಲ್ಲಿ ನಿಲ್ಲಲಿದೆ.

ಪ್ರಯಾಣಿಕರು ಟಿಕೆಟ್ ಪಡೆದು ಪ್ರಯಾಣಿಸಬೇಕು. ಟಿಕೇಟ್‍ಗಾಗಿ ಕಾಯ್ದಿರಿಸಲು ಎಲ್ಲಾ ಗಣಕೀಕೃತ ಕೇಂದ್ರ ಮತ್ತು www.irctc.co.inವೆಬ್‍ಸೈಟ್‍ನ್ನು ಸಂಪರ್ಕಿಸಬೇಕು. ರೈಲಿನ ಸಮಯ ಮತ್ತು ನಿಲುಗಡೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಎನ್.ಟಿ.ಇ.ಎಸ್.(NTES) ಅಪ್ಲಿಕೇಶನ್ ಡೌನ್‍ಲೋಡ್ ಮಾಡಿ ಪಡೆಯಬಹುದಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...