ಕಲಬುರಗಿ| ಬೆಂಗಳೂರು-ಬೀದರ ನಡುವೆ ಹತ್ತು ಟ್ರಿಪ್‍ಗಳಲ್ಲಿ ವಿಶೇಷ ರೈಲು ಸಂಚಾರ

Date:

Share post:

ಕಲಬುರಗಿ: ಎಸ್‍ಎಮ್‍ವಿಟಿ (SMVT) ಬೆಂಗಳೂರು ಮತ್ತು ಬೀದರ್ ನಡುವೆ ವಿಶೇಷ ರೈಲು (ರೈಲು ಸಂಖ್ಯೆ 06539/06540) ಕೆಳಕಂಡ ದಿನಾಂಕಗಳಂದು 10 ಟ್ರಿಪ್‍ಗಳಲ್ಲಿ ಸಂಚರಿಸುತ್ತಿದ್ದು, ಈ ವಿಶೇಷ ರೈಲು ಕೇಂದ್ರ ರೈಲ್ವೆ ಸೋಲಾಪುರ ವಿಭಾಗದ ಕಲಬುರಗಿ, ಶಹಾಬಾದ್ ಹಾಗೂ ವಾಡಿ ರೈಲು ನಿಲ್ದಾಣಗಳಲ್ಲಿ ನಿಲ್ಲಲಿದೆ ಎಂದು ಕೇಂದ್ರ ರೈಲ್ವೆ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಸ್‍ಎಮ್‍ವಿಟಿ (SMVT) ಬೆಂಗಳೂರು-ಬೀದರ್ ವಿಶೇಷ ರೈಲುಗಳು (ರೈಲು ಸಂಖ್ಯೆ 06539) (5 ಟ್ರಿಪ್) ಪ್ರತಿ ಶುಕ್ರವಾರ ಮತ್ತು ಭಾನುವಾರ ಇದೇ ಜೂನ್ 15 ರಿಂದ 29 ರವರೆಗೆ ಎಸ್‍ಎಮ್‍ವಿಟಿ (SMVT) ಬೆಂಗಳೂರಿನಿಂದ ರಾತ್ರಿ 21:15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 10:15 ಕ್ಕೆ ಬೀದರಕ್ಕೆ ತಲುಪಲಿದೆ.

ವಿಶೇಷ ರೈಲು ಸಂಖ್ಯೆ 06540 (5 ಟ್ರಿಪ್) ಪ್ರತಿ ಶನಿವಾರ ಮತ್ತು ಸೋಮವಾರ ಇದೇ ಜೂನ್ 16 ರಿಂದ 30 ರವರೆಗೆ ಬೀದರ್‍ನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 4 ಗಂಟೆಗೆ ಎಸ್‍ಎಮ್‍ವಿಟಿ (SMVT) ಬೆಂಗಳೂರಿಗೆ ತಲುಪಲಿದೆ. ಈ ರೈಲು ಹುಮನಾಬಾದ್, ಕಲಬುರಗಿ, ಶಹಾಬಾದ್, ವಾಡಿ, ಯಾದಗಿರಿ, ಕೃಷ್ಣ, ರಾಯಚೂರು, ಮಂಥ್ರಾಲಯಂ ರಸ್ತೆ, ಅದೋನಿ, ಗುಂಟಕಲ್, ಅನಂತಪುರ, ಧರ್ಮಾವರಂ, ಹಿಂದೂಪುರ ಮತ್ತು ಯಲಹಂಕದಲ್ಲಿ ನಿಲ್ಲಲಿದೆ.

ಪ್ರಯಾಣಿಕರು ಟಿಕೆಟ್ ಪಡೆದು ಪ್ರಯಾಣಿಸಬೇಕು. ಟಿಕೇಟ್‍ಗಾಗಿ ಕಾಯ್ದಿರಿಸಲು ಎಲ್ಲಾ ಗಣಕೀಕೃತ ಕೇಂದ್ರ ಮತ್ತು www.irctc.co.inವೆಬ್‍ಸೈಟ್‍ನ್ನು ಸಂಪರ್ಕಿಸಬೇಕು. ರೈಲಿನ ಸಮಯ ಮತ್ತು ನಿಲುಗಡೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಎನ್.ಟಿ.ಇ.ಎಸ್.(NTES) ಅಪ್ಲಿಕೇಶನ್ ಡೌನ್‍ಲೋಡ್ ಮಾಡಿ ಪಡೆಯಬಹುದಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...