ಕಲಬುರಗಿ| ಬೆಂಗಳೂರು-ಬೀದರ ನಡುವೆ ಹತ್ತು ಟ್ರಿಪ್‍ಗಳಲ್ಲಿ ವಿಶೇಷ ರೈಲು ಸಂಚಾರ

Date:

Share post:

ಕಲಬುರಗಿ: ಎಸ್‍ಎಮ್‍ವಿಟಿ (SMVT) ಬೆಂಗಳೂರು ಮತ್ತು ಬೀದರ್ ನಡುವೆ ವಿಶೇಷ ರೈಲು (ರೈಲು ಸಂಖ್ಯೆ 06539/06540) ಕೆಳಕಂಡ ದಿನಾಂಕಗಳಂದು 10 ಟ್ರಿಪ್‍ಗಳಲ್ಲಿ ಸಂಚರಿಸುತ್ತಿದ್ದು, ಈ ವಿಶೇಷ ರೈಲು ಕೇಂದ್ರ ರೈಲ್ವೆ ಸೋಲಾಪುರ ವಿಭಾಗದ ಕಲಬುರಗಿ, ಶಹಾಬಾದ್ ಹಾಗೂ ವಾಡಿ ರೈಲು ನಿಲ್ದಾಣಗಳಲ್ಲಿ ನಿಲ್ಲಲಿದೆ ಎಂದು ಕೇಂದ್ರ ರೈಲ್ವೆ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಸ್‍ಎಮ್‍ವಿಟಿ (SMVT) ಬೆಂಗಳೂರು-ಬೀದರ್ ವಿಶೇಷ ರೈಲುಗಳು (ರೈಲು ಸಂಖ್ಯೆ 06539) (5 ಟ್ರಿಪ್) ಪ್ರತಿ ಶುಕ್ರವಾರ ಮತ್ತು ಭಾನುವಾರ ಇದೇ ಜೂನ್ 15 ರಿಂದ 29 ರವರೆಗೆ ಎಸ್‍ಎಮ್‍ವಿಟಿ (SMVT) ಬೆಂಗಳೂರಿನಿಂದ ರಾತ್ರಿ 21:15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 10:15 ಕ್ಕೆ ಬೀದರಕ್ಕೆ ತಲುಪಲಿದೆ.

ವಿಶೇಷ ರೈಲು ಸಂಖ್ಯೆ 06540 (5 ಟ್ರಿಪ್) ಪ್ರತಿ ಶನಿವಾರ ಮತ್ತು ಸೋಮವಾರ ಇದೇ ಜೂನ್ 16 ರಿಂದ 30 ರವರೆಗೆ ಬೀದರ್‍ನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 4 ಗಂಟೆಗೆ ಎಸ್‍ಎಮ್‍ವಿಟಿ (SMVT) ಬೆಂಗಳೂರಿಗೆ ತಲುಪಲಿದೆ. ಈ ರೈಲು ಹುಮನಾಬಾದ್, ಕಲಬುರಗಿ, ಶಹಾಬಾದ್, ವಾಡಿ, ಯಾದಗಿರಿ, ಕೃಷ್ಣ, ರಾಯಚೂರು, ಮಂಥ್ರಾಲಯಂ ರಸ್ತೆ, ಅದೋನಿ, ಗುಂಟಕಲ್, ಅನಂತಪುರ, ಧರ್ಮಾವರಂ, ಹಿಂದೂಪುರ ಮತ್ತು ಯಲಹಂಕದಲ್ಲಿ ನಿಲ್ಲಲಿದೆ.

ಪ್ರಯಾಣಿಕರು ಟಿಕೆಟ್ ಪಡೆದು ಪ್ರಯಾಣಿಸಬೇಕು. ಟಿಕೇಟ್‍ಗಾಗಿ ಕಾಯ್ದಿರಿಸಲು ಎಲ್ಲಾ ಗಣಕೀಕೃತ ಕೇಂದ್ರ ಮತ್ತು www.irctc.co.inವೆಬ್‍ಸೈಟ್‍ನ್ನು ಸಂಪರ್ಕಿಸಬೇಕು. ರೈಲಿನ ಸಮಯ ಮತ್ತು ನಿಲುಗಡೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಎನ್.ಟಿ.ಇ.ಎಸ್.(NTES) ಅಪ್ಲಿಕೇಶನ್ ಡೌನ್‍ಲೋಡ್ ಮಾಡಿ ಪಡೆಯಬಹುದಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...