ಕಲಬುರಗಿ| ಅಕ್ರಮ ಸಂಬಂಧ; ಗಂಡನನ್ನೇ ಕೊಲೆಗೈದ ಪತ್ನಿ

Date:

Share post:

ಕಲಬುರಗಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ ಗೃಹಿಣಿಯೊಬ್ಬಳು ಪ್ರಿಯಕರನ ಜೊತೆಗೂಡಿ ತನ್ನ ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಗುರುವಾರ ಮಧ್ಯರಾತ್ರಿ ಚಿತ್ತಾಪುರ ತಾಲೂಕಿನ ಭಾಗೋಡಿ ಗ್ರಾಮದಲ್ಲಿ ನಡೆದಿದೆ.

ತಿಪ್ಪಣ್ಣ ಅಲಿಯಾಸ್ ಕುಪೇಂದ್ರ (30) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಬಾರದೆಂದು ಶಾಂತಮ್ಮ ಮತ್ತು ಆಕೆಯ ಪ್ರಿಯಕರ ಸೇರಿ ತಿಪ್ಪಣ್ಣ ಕುಪೇಂದ್ರ ಎನ್ನುವವರನ್ನು ತಲೆದಿಂಬ್ಬಿಂದ ಮುಖವನ್ನು ಮುಚ್ಚಿ ಉಸಿರು ಗಟ್ಟಿಸಿ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದೆ.

ಶಾಂತಮ್ಮನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರಿಯಕರ ಪರಾರಿಯಾಗಿದ್ದು, ಆತನನ್ನು ಕೂಡಲೇ ಬಂಧಿಸಲಾಗುವುದು ಎಂದು ಪಿಎಸ್’ಐ ಶ್ರೀಶೈಲ್ ಅಂಬಾಟಿ ಮಾಹಿತಿ ನೀಡಿದ್ದಾರೆ.

ತಲೆದಿಂಬ್ಬಿಂದ್ದ ಮುಖವನ್ನು ಮುಚ್ಚಿ ಉಸಿರು ಗಟ್ಟಿಸುತ್ತಿರುವಾಗ ತಿಪ್ಪಣ್ಣ ಕುಪೇಂದ್ರ ಎನ್ನುವವರು ಜೋರಾಗಿ ಕಿರುಚಿದ್ದಾರೆ. ಅಕ್ಕ ಪಕ್ಕದವರು ಏನಾಗಿದೆ ಎಂದು ಮನೆಯ ಬಾಗಿಲು ಬಡಿದಾಗ ಬಾಗಿಲು ತೆಗೆಯದಿದ್ದಾಗ ಅನುಮಾನಗೊಂಡು ಕೂಡಲೇ 112 ಗೆ ಕರೆ ಮಾಡಿ ಪೊಲೀಸರನ್ನು ಕರೆಸಿದಾಗ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಿಯಕರನಾದವನು ಅಟ್ಟದ ಮೇಲಿನ ಕಿಡಕಿಯಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಕೊಲೆಯಾದ ವ್ಯಕ್ತಿಯ ಶವವನ್ನು ಚಿತ್ತಾಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಶಂಕರಗೌಡ ಪಾಟೀಲ್, ಸಿಪಿಐಗಳಾದ ನಟರಾಜ ಲಾಡೆ, ಚಂದ್ರಶೇಖರ ತಿಗಡಿ, ಎಎಸ್’ಐ ಲಾಲಹ್ಮದ್, ಸಿಬ್ಬಂದಿಗಳಾದ ದತ್ತು ಜಾನೆ, ರವಿಕುಮಾರ, ಸವಿಕುಮಾರ, ಅನೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...