ಕಲಬುರಗಿ| ಕೋಮು ಸಂಘರ್ಷಕ್ಕೆ ಯತ್ನಿಸಿದ ಮಣಿಕಂಠ ರಾಠೋಡ್, ಆಂದೋಲಾ ಸ್ವಾಮಿ, ಚಂದು ಪಾಟೀಲ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Date:

Share post:

ಕಲಬುರಗಿ: ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹೇಳಿಕೆಗಳನ್ನು ನೀಡುತ್ತಿರುವ ಬಿಜೆಪಿ ಮುಖಂಡರಾದ ಮಣಿಕಂಠ ರಾಠೋಡ್, ಚಂದು ಪಾಟೀಲ್, ಆಂದೋಲಾ ಸ್ವಾಮೀಜಿ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ, ಆಮ್ ಆದ್ಮಿ ಪಾರ್ಟಿಯ ಅಲ್ಪಸಂಖ್ಯಾತ ಘಟಕದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

 

ಬಳಿಕ ಮಾತನಾಡಿದ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಸುಲೇಮಾನ್ ಅಲಿ, ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷಕಾರಿ ಹೇಳಿಕೆ ನೀಡುತ್ತಿದ್ದರೂ ಜಿಲ್ಲೆಯಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ, 15 ನಿಮಿಷ ಪೊಲೀಸರನ್ನು ತಡೆದರೆ ಮುಸ್ಲಿಂ ಸಮುದಾಯವನ್ನು ನಾಶ ಮಾಡುವುದಾಗಿ ಹೇಳಿದ ಮಣಿಕಂಠ ರಾಠೋಡ್, ಮುಸ್ಲಿಂ ಬಡಾವಣೆಗಳಿಗೆ ನುಗ್ಗಲು ಪ್ರಯತ್ನಿಸಿದ ಚಂದು ಪಾಟೀಲ್ ವಿರುದ್ಧ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿಲ್ಲ. ಇಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಾವೇ ಖುದ್ದಾಗಿ ಪ್ರಕರಣ ದಾಖಲಿಸಿದ್ದೇವೆ. ಸರಕಾರ ಯಾವುದೇ ಕ್ರಮ ಜರುಗಿಸಿಲ್ಲ. ಇದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕಿ ಖನೀಜ್ ಫಾತೀಮಾ ಅವರು ಯಾಕೆ ಮೌನ ವಹಿಸಿದ್ದಾರೆ ಎನ್ನುವುದನ್ನು ಗೊತ್ತಾಗಬೇಕಿದೆ ಎಂದು ಹೇಳಿದರು.

ಸಾಮಾಜಿಕ ಕಾರ್ಯಕರ್ತ ಶಿರಾಜ್ ಶಾಬ್ದಿ ಮಾತನಾಡಿ, ಮಣಿಕಂಠ ರಾಠೋಡ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದರೂ ಬಂಧಿಸಿಲ್ಲ ಏಕೆ? ಅವರ ವಿರುದ್ಧ ರೌಡಿಶೀಟರ್ ತೆಗೆದು ಜೈಲಿಗೆ ಅಟ್ಟಬೇಕು, ಇಲ್ಲದಿದ್ದರೆ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಆರೋಪಿಗಳು ಪೊಲೀಸರ ಸುಪರ್ದಿಗೆ ಸಿಗದಿದ್ದರೆ ನಮಗೆ ಅವಕಾಶ ಕೊಡಿ, ಆರೋಪಿಗಳು ಎಲ್ಲೇ ಇದ್ದರೂ ಅವರನ್ನು ಕರೆ ತರುವ ಕೆಲಸ ನಾವು ಮಾಡುತ್ತೇವೆ ಎಂದು ಕಿಡಿಕಾರಿದರು.

 

ಅಪರ ಜಿಲ್ಲಾಧಿಕಾರಿಗಳಿಗೆ ನೀಡಿದ ಮನವಿ ಪತ್ರದಲ್ಲಿ ಬಿಜೆಪಿ ಮುಖಂಡರಾದ ಮಣಿಕಂಠ ರಾಠೋಡ್, ಚಂದು ಪಾಟೀಲ್, ಶಾಸಕ ಶರಣು ಸಲಗರ್, ಆಂದೋಲಾ ಸ್ವಾಮೀಜಿ, ಉಮೇಶ್ ಪುರಿ ಸೇರಿದಂತೆ ಮತ್ತಿತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.

ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು, ಮತ್ತಿತರ ಸoಘಟನೆಗಳ ಸದಸ್ಯರು ಪಾಲ್ಗೊಂಡಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...