ಕಲಬುರಗಿ| ಉತ್ತಮ ಆರೋಗಕ್ಕೆ ಯೋಗವೇ ಮದ್ದು: ಬಾಬುರಾವ ಪಾಟೀಲ 

Date:

Share post:

ಕಲಬುರಗಿ: ಇಂದಿನ ದಿನಮಾನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿಯಿಂದ ಜನರು ಅನಾರೋಗ್ಯಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ವಿಷಯ. ಹಾಗಾಗಿ ಉತ್ತಮ ಆರೋಗ್ಯವನ್ನು ವೃದ್ಧಿಸಲು ಯೋಗ ಮದ್ದು ಆಗಿದೆ ಎಂದು ನಿವೃತ್ತ ಆರೋಗ್ಯ ಅಧಿಕಾರಿಗಳಾದ ಬಾಬುರಾವ ಪಾಟೀಲ ಚಿತ್ತಕೋಟೆ ಹೇಳಿದರು.

ಅವರು ನಗರದ ಜಿಡಿಎ ಲೇಔಟಿನ ದತ್ತಾತ್ರೆಯ ಪಾಟೀಲ ರೇವೂರ ಉದ್ಯಾನವನವದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ವೆ ಸಾಮಾನ್ಯ ಯೋಗಾಸನ ಒಂದು ಉತ್ತಮ ಔಷಧಿ ಇದ್ದಂತೆ ದಿನನಿತ್ಯ ಯೋಗಾಸನ ಮಾಡುವುದರಿಂದ ಅನೇಕ ರೋಗಗಳು ಬರದಂತೆ ತಡೆಗಟ್ಟಬಹುದಲ್ಲದೆ ಬಂದಂತಹ ರೋಗಗಳು ನಿವಾರಿಸಬಹುದು ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಭೀಮಾಶಂಕರ ಅಂಕಲಗಿ, ಎಸ್.ಜಿ.ಬಿರಾದಾರ, ಸಾಯಿಬಣ್ಣ ನೀಲಪ್ಪಗೋಳ, ಮಲ್ಲಣ್ಣ ದೇಸಾಯಿ, ನಿಜಲಿಂಗ ಗುಗ್ಗರಿ, ಶಿವಕುಮಾರ ದೇಸಾಯಿ, ರಾಜಶೇಖರ ಸರ್ ಹಾಗೂ ಇತರರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...