ಕಲಬುರಗಿ| ಅಕ್ರಮ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳದ ಮಹಾನಗರ ಪಾಲಿಕೆ ವಿರುದ್ಧ ಜೆಪಿ ಸಂಘಟನೆ ಪ್ರತಿಭಟನೆ 

Date:

Share post:

ಕಲಬುರಗಿ: ನಗರದಲ್ಲಿ ತಲೆ ಎತ್ತಿರುವ ಅಕ್ರಮ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳದೇ ಕಾಲ ಹರಣ ಮಾಡುತ್ತಿರುವ ಕಲಬುರಗಿಯ ಪಾಲಿಕೆ ಆಯುಕ್ತರು, ಮೇಯರ್ ಮತ್ತು ಶಾಸಕರ ನೀತಿ ಖಂಡಿಸಿ, ಪಾಲಿಕೆಯ ಕಚೇರಿಯ ಎದುರುಗಡೆ ಜನತಾ ಪರಿವಾರ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

 

ನಕಲಿ ಕಟ್ಟಡ ಪರವಾನಗಿಗಳ ಮೇಲೆ ಯಾವುದೇ ಕ್ರಮವಿಲ್ಲ, ಪಾಲಿಕೆಯಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ, ಇ ಖಾತಾ (ಎ ಮತ್ತು ಬಿ) ಖಾತಾ ನಡುವಿನ ವ್ಯತ್ಯಾಸದ ಸಮಸ್ಯೆ ಬಗೆ ಹರಿಸದಿರುವುದು, ಹೆಚ್ಚುತ್ತಿರುವ ಬೀದಿ ನಾಯಿಗಳ ದಾಳಿಯ ಕುರಿತು ಕ್ರಮ, ಸರ್ವೀಸ್ ರಸ್ತೆಗಳ ಸಮಸ್ಯೆಗಳು, ಕಾರ್ಪೊರೇಷನ್ ಸಂಕೀರ್ಣದ ಸಮಸ್ಯೆಗಳು, ಅನೈರ್ಮಲ್ಯ ಕುಡಿಯುವ ನೀರಿನ ಸಮಸ್ಯೆ, ಸೇರಿದಂತೆ ಕಸ ವಿಲೇವಾರಿ, ವಿದ್ಯುತ್ ಕಂಬಗಳು, ಒಳಚರಂಡಿ ಮತ್ತು 24/7 ನೀರು ಸರಬರಾಜು ಮಾಡಬೇಕೆಂದು ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದರು.

 

ಈ ಸಂದರ್ಭದಲ್ಲಿ ಮಾತನಾಡಿದ ಜನತಾ ಪರಿವಾರ ಸಂಘಟನೆ ಅಧ್ಯಕ್ಷ ಸಿರಾಜ್ ಶಾಬ್ಧಿ, ಪಾಲಿಕೆಯ ಕೆಲವು ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಹಣ ಪಡೆದುಕೊಂಡು ಅಕ್ರಮ ಕಟ್ಟಡಗಳಿಗೆ ಪರವಾನಗಿ ಕೊಡುತ್ತಿದ್ದಾರೆ. ಇಂತಹ ಕೆಲಸಗಳಿಂದಾಗಿ ನಗರ ವಾಸಿಗಳ ನಡುವೆ ಮಾರಣಾಂತಿಕ ಹಲ್ಲೆ ಪ್ರಕರಣಗಳು ನಡೆಯುತ್ತಿವೆ. ಕೂಡಲೇ ಇವುಗಳ ಬಗ್ಗೆ ಎಚ್ಚೆತ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಖಾಲೀದ್ ಅಬ್ರಾರ್, ಶೇಖ್ ಸೈಫನ್, ಆಕಾಶ್ ರಿಡ್ಲಾನ್, ಅಝರ್ ಮುಬಾರಕ್, ಅಝಮತ್ ಉಲ್ ಖಾದ್ರಿ, ಮುಬೀನ್ ಪೆಹಾಲ್ವನ್, ಅಬ್ದುಲ್ ಖದಿರ್, ಬಷೀದ್ ಶೇಖ್, ಶೇಖ್ ಜಾವೀದ್, ಶರಣು, ಸೇರಿದಂತೆ ಹಲವರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...