ಕಲಬುರಗಿ| ಆರ್ ಡಿಪಿಆರ್ ಇಲಾಖೆಯ ಇಇ, ಪಿಡಿಓ ಮನೆ ಮೇಲೆ ಲೋಕಾಯುಕ್ತ ದಾಳಿ: ಪರಿಶೀಲನೆ

Date:

Share post:

ಕಲಬುರಗಿ: ಮುಂದಿನ ನಾಲ್ಕು ದಿನಗಳಲ್ಲಿ ನಿವೃತಿಯಾಗಲಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರಿಂಗ್ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ ಅವರ ಬೆಂಗಳೂರಿನ ಮನೆ ಹಾಗೂ ಕಲಬುರಗಿ ಮನೆ ಕಚೇರಿ ಸೇರಿದಂತೆ ಸಣ್ಣೂರು ಗ್ರಾಮದ ಪಿಡಿಓ ರಾಮಚಂದ್ರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಅಕ್ರಮ ಸಂಪಾದನೆ ಆರೋಪದ ದೂರಿನ ಮೇರೆಗೆ ಇಇ ಮಲ್ಲಿಕಾರ್ಜುನ ಅಲಿಪುರ ಮನೆ ಮೇಲೆ ದಾಳಿ ಮಾಡಿದ್ದು, ಅಕ್ರಮ ಗಳಿಕೆ ಸೇರಿದಂತೆ ಇತರ ಆರೋಪಗಳ ಅಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕಲಬುರಗಿ ತಾಲ್ಲೂಕಿನ ಸಣ್ಣೂರು ಗ್ರಾಮದ ಪಿಡಿಓ ರಾಮಚಂದ್ರ ಅವರಿಗೆ ಸೇರಿರುವ ಎನ್ನಲಾದ ಸೇಡಂ ರಸ್ತೆಯ ಮಾನಸ ರೆಸಿಡೆನ್ಸಿ ಮತ್ತು ವಿಜಯಪುರ ಜಿಲ್ಲೆಯ ಬೊಮ್ಮನಹಳ್ಳಿ ಗ್ರಾಮದ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಎರಡು ದಾಳಿಯಲ್ಲಿ ನಾಲ್ಕು ಪೊಲೀಸ್ ಅಧಿಕಾರಿಗಳ ತಂಡಗಳು ಪ್ರತ್ಯೇಕವಾಗಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಕಲಬುರಗಿ ಲೋಕಾಯುಕ್ತ ಎಸ್ಪಿ ಬಿ.ಕೆ.ಉಮೇಶ್, ಡಿವೈಎಸ್‌ ಪಿ ಗೀತಾ ಬೇನಾಳ ನೈತೃತ್ವದಲ್ಲಿ ದಾಳಿ ನಡೆಸಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...