ಪ್ರಿಯಾಂಕ್ ಖರ್ಗೆಯಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಶೂನ್ಯ: ಡಾ. ಸುಧಾ ಆರ್ ಹಾಲಕಾಯಿ

Date:

Share post:

ಕಲಬುರಗಿ: ಕಳೆದ ಕೆಲವು ದಿನಗಳಿಂದ ಸಚಿವರಾದ ಪ್ರಿಯಾಂಕ್ ಖರ್ಗೆ ಭೇಟಿಯಿಂದ ರಾಜ್ಯಕ್ಕೆ ಬಂಡವಾಳ ಹರಿದು ಬರುತ್ತದೆ ಎಂದು ಅಂದುಕೊಳ್ಳುವಂಥದ್ದು ಸತ್ಯಕ್ಕೆ ದೂರವಾದದ್ದು ಎಂದು ಬಿಜೆಪಿ ಕರ್ನಾಟಕ ರಾಜ್ಯ ವಕ್ತಾರರಾದ ಡಾ. ಸುಧಾ ಹಾಲಕಾಯಿ ಹೇಳಿದ್ದಾರೆ.

ಬಂಡವಾಳ ಹರಿದು ಬರುವಂಥದ್ದು- ಆ ಪ್ರದೇಶದಲ್ಲಿ ಇರುವಂತಹ ಮಾನವ ಸಂಪನ್ಮೂಲ, ವಾತಾವರಣ, ಉದ್ಯೋಗಕ್ಕೆ ಮತ್ತು ಉದ್ಯಮಕ್ಕೆ ಅಗತ್ಯವಿರುವಂತಹ ಪರಿಸರ, ಸರಕಾರದ ಪ್ರೋತ್ಸಾಹ- ಈ ನಾಲ್ಕು ಸಂಗತಿಗಳನ್ನು ಆಧರಿಸಿ ರಾಜ್ಯಕ್ಕೆ ಬಂಡವಾಳ ಹರಿದು ಬರುವುದು ಸಹಜ. ಆದರೆ ಇಲ್ಲಿ ಕರ್ನಾಟಕದ ಇವತ್ತಿನ ಪರಿಸ್ಥಿತಿಯಲ್ಲಿ- ಅಂದರೆ ಒಂದು ಭ್ರಷ್ಟ ಸರಕಾರ, ಪ್ರತಿಯೊಂದರಲ್ಲೂ ಲಂಚ, ಕಮಿಷನ್ ಇಲ್ಲದೆ ಯಾವುದೇ ಕಾರ್ಯ ನಡೆಯದಂತಹ ಸ್ಥಿತಿ ನಿರ್ಮಾಣವಾಗಿದೆ. ತನ್ನನ್ನು ತಾನೇ ಸರ್ವಜ್ಞ ಎಂದು ಭಾವಿಸಿಕೊಂಡಿರುವ ಪ್ರಿಯಾಂಕ್ ಖರ್ಗೆಯವರು, ಅವರ ಪಕ್ಷದೊಳಗಿನ ಸತ್ಯವನ್ನು ಅನಾವರಣ ಮಾಡಿದರೆ, ಭ್ರಷ್ಟಾಚಾರ ವ್ಯಾಪಕತೆಯ ಬಗ್ಗೆ ಹಿರಿಯರಾದ ಬಿ.ಆರ್. ಪಾಟೀಲರು, ಅಲ್ಲಮ ಪ್ರಭು ಅವರು, ರಾಜು ಕಾಗೆ ಮತ್ತು ಮಿಕ್ಕೆಲ್ಲಾ ಶಾಸಕರು- ಭ್ರಷ್ಟಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ...

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...

ಕಲಬುರಗಿ: ಗುಂಡಿನ ದಾಳಿ; ವ್ಯಕ್ತಿಯ ಭೀಕರ ಕೊಲೆ

ಕಲಬುರಗಿ: ಬಲರಾಮ ಚೌಕ್ ನಿಂದ ವಾಡಿ ಪಟ್ಟಣಕ್ಕೆ ಸ್ಕೂಟಿ ಮೇಲೆ ಹೋಗುತ್ತಿದ್ದ...

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...