ಕಲಬುರಗಿ| ಇಶಾ ಫೌಂಡೇಶನ್‍ದಿಂದ ಜೈಲ್ ಬಂದಿಗಳಿಗೆ ಯೋಗಾಭ್ಯಾಸ

Date:

Share post:

ಕಲಬುರಗಿ: 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರಿನ ಇಶಾ ಪೌಂಡೇಷನ್ ವತಿಯಿಂದ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಮಂಗಳವಾರ ಪ್ರೋಜೆಕ್ಟರ್ ಸ್ಕ್ರೀನ್ ಮೂಲಕ ಯೋಗದ ಕುರಿತು ಮಾಹಿತಿ ನೀಡುವುದರ ಮೂಲಕ ಎಲ್ಲಾ ಕಾರಾಗೃಹದ ಬಂದಿಗಳಿಗೆ ಯೋಗಾಭ್ಯಾಸ ಮಾಡಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥೆ ಡಾ. ಅನಿತಾ ಆರ್. ಅವರು ಮಾತನಾಡಿ, ಬೆಂಗಳೂರಿನ ಇಶಾ ಪೌಂಡೇಷನ್‍ನ ಯೋಗ ಶಿಕ್ಷಕರು ಯೋಗಾಸನಗಳ ಕುರಿತು ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ ಸಿಬ್ಬಂದಿಗಳಿಗೆ ಹಾಗೂ ಬಂದಿಗಳಿಗೆ ತರಬೇತಿ ನೀಡಿದ್ದು, ಮುಂದಿನ ದಿನಗಳಿಗೆ ನಿರಂತರವಾಗಿ ಇಶಾ ಪೌಂಡೇಷನ್ ವತಿಯಿಂದ ಅಧಿಕಾರಿ/ಸಿಬ್ಬಂದಿಗಳಿಗೆ ಹಾಗೂ ಬಂದಿಗಳಿಗೆ ಒಂದು ವಾರದ ಕೋರ್ಸ್‍ನಂತೆ ತರಬೇತಿ ನೀಡಲು ಯೋಜನೆಯನ್ನು ರೂಪಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧೀಕ್ಷಕ ಎಂ.ಹೆಚ್. ಆಶೇಖಾನ್ ಅವರು ಮಾತನಾಡಿ, ದಿನ ನಿತ್ಯ ಯೋಗ ಮಾಡಿ ಉತ್ತಮ ಆರೋಗ್ಯ ಹೊಂದಿ, ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾರಾಗೃಹದ ಎಲ್ಲಾ ಬಂದಿಗಳು ಅತೀ ಉತ್ಸಾಹದಿಂದ ಈ ಯೋಗ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗಾಭ್ಯಾಸ ಮಾಡಿದರು. ಬೆಂಗಳೂರಿನ ಇಶಾ ಪೌಂಡೇಷನ್ ಸಂಸ್ಥೆಯ ಯೋಗ ಗುರುಗಳಾದ ಸತೀಶ್‍ಕುಮಾರ ಪಾಟೀಲ್ ಮತ್ತು ಯುವರಾತ್ ಮತ್ತು ರವಿತೇಜ್ ಅವರು ಕಾರಾಗೃಹದ ಅಧಿಕಾರಿ/ಸಿಬ್ಬಂದಿ ಹಾಗೂ ಬಂದಿಗಳು ಸೇರಿದಂತೆ ಒಟ್ಟು 150 ಜನರಿಗೆ ಯೋಗವನ್ನು ಮಾಡಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹಾಯಕ ಅಧೀಕ್ಷಕ ಚನ್ನಪ್ಪ, ಸಹಾಯಕ ಆಡಳಿತಾಧಿಕಾರಿ ಭೀಮಾಶಂಕರ ಡಾಂಗೆ, ಜೈಲರ್‍ಗಳಾದ ಸುನಂದ ವಿ., ಸಾಗರ ಪಾಟೀಲ್. ಶ್ರೀಮಂತಗೌಡ ಪಾಟೀಲ್, ಶಾಮರಾವ ಬಿದ್ರಿ, ಸೇರಿದಂತೆ ಮತ್ತಿತರ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈ ಸಂಸ್ಥೆಯ ಶಿಕ್ಷಕರಾದ ನಾಗರಾಜ ಮೂಲಗೆ ಕಾರ್ಯಕ್ರಮ ನಿರ್ವಹಿಸಿದರು. ಕೊನೆಯಲ್ಲಿ ಸಂಸ್ಥೆಯ ಅಧೀಕ್ಷಕ ಎಂ.ಹೆಚ್. ಆಶೇಖಾನ್ ವಂದಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...