ಕಲಬುರಗಿ| ಕಿಣ್ಣಿಸುಲ್ತಾನ ಗ್ರಾಪಂ ಉಪಾಧ್ಯಕ್ಷರಾಗಿ ಮಥುರಾಬಾಯಿ ಅವಿರೋಧ ಆಯ್ಕೆ

Date:

Share post:

ಕಲಬುರಗಿ: ಆಳಂದ ತಾಲೂಕಿನ ಕಿಣ್ಣಿಸುಲ್ತಾನ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಎಸ್ಸಿ ಮೀಸಲು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಿಣ್ಣಿಸುಲ್ತಾನ ತಾಂಡಾದ ಬಿಜೆಪಿ ಬೆಂಬಲಿತ ಸದಸ್ಯೆ ಮಥುರಾಬಾಯಿ ಸುಭಾಷ ಚವ್ಹಾಣ ಅವರು ಶುಕ್ರವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 

ತಹಸೀಲ್ದಾರ ಅಣ್ಣಾರಾವ್ ಪಾಟೀಲ ಅವರು ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ಉಪಾಧ್ಯಕ್ಷ ಸ್ಥಾನಕ್ಕೆ ಸದಸ್ಯೆ ಮಥುರಾಬಾಯಿ ಚವ್ಹಾಣ ಅವರ ಹೊರತುಪಡಿಸಿ ಯಾರೊಬ್ಬರ ನಾಮಪತ್ರ ಸಲ್ಲಿಕೆ ಮಾಡಿರುವುದರಿಂದ ಮಥುರಾಬಾಯಿ ಅವರನ್ನು ಅವಿರೋಧವನ್ನಾಗಿ ಚುನಾವಣಾಧಿಕಾರಿಗಳು ಘೋಷಿಸಿದರು. ಪಿಡಿಒ ರಮೇಶ ಪ್ಯಾಟಿ, ಗ್ರಾಮ ಆಡಳಿತಾಧಿಕಾರಿ ದತ್ತಾ ರಾಠೋಡ, ಕಂದಾಯ ನಿರೀಕ್ಷಿಕ ಅಲ್ಲಾವೋದ್ದೀನ ಶೇಖ ಚುನಾವಣೆ ಪ್ರಕ್ರಿಯೆಗೆ ಸಹಕರಿಸಿದರು.

ಬಳಿಕ ನೂತನ ಉಪಾಧ್ಯಕ್ಷರಿಗೆ ಗ್ರಾಪಂ ಅಧ್ಯಕ್ಷ ಮಹಿಬೂಬ ಭಾಷಾ ಶೇಖ ಅವರು ಸನ್ಮಾನಿಸಿ ಅಭಿವೃದ್ಧಿಗೆ ಸರ್ವರ ಸಹಕಾರ ಅಗತ್ಯವಾಗಿದೆ. ಎಲ್ಲರೂ ಕೂಡಿ ಉಳಿದಷ್ಟು ಅವಧಿಯಲ್ಲಿ ಕಾಮಗಾರಿ ಕೈಗೊಂಡು ಜನರಿಗೆ ಅನುಕೂಲ ಮಾಡಿಕೊಡೋಣಾ ಎಂದು ಹೇಳಿದರು.

ಈ ಸಂದರ್ಭಧಲ್ಲಿ ಗ್ರಾಪಂ ಮಾಜಿ ಅಧ್ಯಕ್ಷೆ ನಾಗಮ್ಮ ಮೂಲಗೆ, ಸದಸ್ಯ ಕೃಷ್ಣಾ ಕಾಂಬಳೆ, ಸುರೇಶ ಕದರಗೆ, ಕುಪ್ಪಣ್ಣಾ ವಡಗಾಂವ, ಶಾಂತು ಶಹಾಪೂರೆ, ಶಿವರಾಯ ಪೂಜಾರಿ, ಲಲಿತಾ ಮೋದೆ, ಆಶಾ ಧೂಳೆ, ಶಿವುಪುತ್ರ ಪೂಜಾರಿ, ಶರಣು ಕುಂಬಾರ ಸೇರಿದಂತೆ ಗ್ರಾಮದ ಮುಖಂಡ ಪಂಡಿತರಾವ್ ಪಾಟೀಲ, ರಾಜು ಪಾಟೀಲ, ಬಸವರಾಜ ಕೇರೂರ, ನಾಗೇಂದ್ರ ಚನ್ನಶಟ್ಟಿ, ಕಲ್ಯಾಣಿ ಶೃಂಗೇರಿ, ನಿತೀನ ಚವ್ಹಾಣ, ಗುತ್ತಿಗೆದಾರ ಮಹಾದೇವ ಲಕುಕಳ್ಳೆ ಅನೇಕರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...