ಕಲಬುರಗಿ| ಶಾಸಕ ಬಸವರಾಜ ಮತ್ತಿಮಡು ವಿರುದ್ಧ ದ್ವೇಷಕಾರಿ ಹೇಳಿಕೆ ಆರೋಪ; ಸವಿತಾನಂದ ಸ್ವಾಮೀಜಿ ವಿರುದ್ಧ ಜಾತಿ ನಿಂದನಾ ಪ್ರಕರಣ ದಾಖಲು

Date:

Share post:

ಕಲಬುರಗಿ: ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಕೊಂಚೂರಿನ ಸವಿತಾ ಸಮಾಜ ಮಠದ ಧರಯ್ಯನಂದಾ ಸ್ವಾಮೀಜಿ( ಸವಿತಾನಂದ ಸ್ವಾಮೀಜಿ) ವಿರುದ್ದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಶ್ರೀನಿವಾಸ ಸರಡಗಿಯ ಮಲ್ಲಿಕಾ ರ್ಜುನ ಕಿಳ್ಳಿ ಎಂಬುವವರು ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ನಂದಿಕೂರ ತಾಂಡಾದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವರ ವಿರುದ್ಧ ಪೋಕ್ಸ್ ಕಾಯ್ದೆ ಅನುಸಾರ ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಜೂ.24ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಡೆಸಿದ ಪ್ರತಿಭಟನೆ ನಡೆಸಲಾಗಿತ್ತು.

ಈ ವೇಳೆ ಮಾತನಾಡಿದ ಧರಯ್ಯಾನಂದ ಸ್ವಾ ಮೀಜಿ, ಶಾಸಕ ಬಸವರಾಜ ಮತ್ತಿಮಡು ಅವರಿಗೆ ಜಾತಿ ನಿಂದನೆ ಮಾಡಿ, ಬಿಜೆಪಿ ನಾಯಕರೇ ನೀವು ಎಲ್ಲಿದ್ದೀರಿ? ನಿಮ್ಮ ಮನೆಯ ಹೆಣ್ಣು ಮಕ್ಕಳಿಗೆ ಅನ್ಯಾಯ ಆಗುವವರೆಗೂ ಮಾತನಾಡುವುದಿಲ್ಲವೇ ಎನ್ನುತ್ತಾ ಏಕವಚನದಲ್ಲೇ ನೀನು ಎಲ್ಲಿದ್ದಿ? ಬೆಟ್ಟಿಂಗ್ ನಲ್ಲಿ ಬ್ಯುಸಿ ಆಗಿರುವೆಯೇ ಎಂದು ಹೇಳಿದ್ದಾರೆ. ಶಾಸಕರು ದಲಿತ ಸಮಾಜದವರು ಎಂದು ಗೊತ್ತಿದ್ದರೂ ಜಾತಿ ನಿಂದನೆ ಮಾಡಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ತಿಳಿದುಬಂದಿದೆ.

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...