ಕಲಬುರಗಿ| ಶಾಸಕ ಬಸವರಾಜ ಮತ್ತಿಮಡು ವಿರುದ್ಧ ದ್ವೇಷಕಾರಿ ಹೇಳಿಕೆ ಆರೋಪ; ಸವಿತಾನಂದ ಸ್ವಾಮೀಜಿ ವಿರುದ್ಧ ಜಾತಿ ನಿಂದನಾ ಪ್ರಕರಣ ದಾಖಲು

Date:

Share post:

ಕಲಬುರಗಿ: ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಕೊಂಚೂರಿನ ಸವಿತಾ ಸಮಾಜ ಮಠದ ಧರಯ್ಯನಂದಾ ಸ್ವಾಮೀಜಿ( ಸವಿತಾನಂದ ಸ್ವಾಮೀಜಿ) ವಿರುದ್ದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಶ್ರೀನಿವಾಸ ಸರಡಗಿಯ ಮಲ್ಲಿಕಾ ರ್ಜುನ ಕಿಳ್ಳಿ ಎಂಬುವವರು ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ನಂದಿಕೂರ ತಾಂಡಾದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವರ ವಿರುದ್ಧ ಪೋಕ್ಸ್ ಕಾಯ್ದೆ ಅನುಸಾರ ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಜೂ.24ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಡೆಸಿದ ಪ್ರತಿಭಟನೆ ನಡೆಸಲಾಗಿತ್ತು.

ಈ ವೇಳೆ ಮಾತನಾಡಿದ ಧರಯ್ಯಾನಂದ ಸ್ವಾ ಮೀಜಿ, ಶಾಸಕ ಬಸವರಾಜ ಮತ್ತಿಮಡು ಅವರಿಗೆ ಜಾತಿ ನಿಂದನೆ ಮಾಡಿ, ಬಿಜೆಪಿ ನಾಯಕರೇ ನೀವು ಎಲ್ಲಿದ್ದೀರಿ? ನಿಮ್ಮ ಮನೆಯ ಹೆಣ್ಣು ಮಕ್ಕಳಿಗೆ ಅನ್ಯಾಯ ಆಗುವವರೆಗೂ ಮಾತನಾಡುವುದಿಲ್ಲವೇ ಎನ್ನುತ್ತಾ ಏಕವಚನದಲ್ಲೇ ನೀನು ಎಲ್ಲಿದ್ದಿ? ಬೆಟ್ಟಿಂಗ್ ನಲ್ಲಿ ಬ್ಯುಸಿ ಆಗಿರುವೆಯೇ ಎಂದು ಹೇಳಿದ್ದಾರೆ. ಶಾಸಕರು ದಲಿತ ಸಮಾಜದವರು ಎಂದು ಗೊತ್ತಿದ್ದರೂ ಜಾತಿ ನಿಂದನೆ ಮಾಡಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ತಿಳಿದುಬಂದಿದೆ.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...