ಕಲಬುರಗಿ| ಝೀ ಟಿವಿ ಕನ್ನಡ ವಾಹಿನಿಯ ಸರಿಗಮಪ ವಿಜೇತೆ ಶಿವಾನಿ ಸ್ವಾಮಿಗೆ ಸತ್ಕಾರ

Date:

Share post:

ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಸಂಗೀತ ಕ್ಷೇತ್ರದ ಪ್ರತಿಭೆ ಕು. ಶಿವಾನಿ ಸ್ವಾಮಿ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಭವನದಲ್ಲಿನ ಕಲಾ ಸೌಧದಲ್ಲಿ ಸತ್ಕರಿಸಿ ಗೌರವಿಸಲಾಯಿತು.

ಇತ್ತೀಚೆಗೆ ಝೀ ಟಿವಿ ಕನ್ನಡ ವಾಹಿನಿಯಲ್ಲಿ ಸರಿಗಮಪ ಸಂಗೀತ ಸ್ಪರ್ಧೆಯಲ್ಲಿ ಅಚಿತಿಮ ಸುತ್ತಿನಲ್ಲಿನ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಸೋಮವಾರ ಕನ್ನಡ ಭವನದಂಗಳ:ಕ್ಕೆ ಆಗಮಿಸಿದ ಕು. ಶಿವಾನಿ ಸ್ವಾಮಿ ಹಾಗೂ ಪಾಲಕರನ್ನು ಆತ್ಮೀಯವಾಗಿ ಸ್ವಾಗತಿಸಿ ಅಭಿನಂದಿಸಲಾಯಿತು.

ಗೌರವ ಸಮ್ಮಾನ ಸ್ವೀಕರಿಸಿ ಮಾತನಾಡಿದ ಕು. ಶಿವಾನಿ ಸ್ವಾಮಿ, ಝೀ ಟಿವಿ ಸ್ಪರ್ಧೆಯಲ್ಲಿ ಭಾಗವಹಿಸುವುದೇ ತುಂಬಾ ಖುಷಿ ಅನಿಸುತ್ತಿತ್ತು. ಯಾವ ಘಳಿಗೆಯಲ್ಲಿ ಫಲಿತಾಂಶ ಏನಾಗುತ್ತಿತೆಂಬ ಕುತೂಹಲ ಕಾಡುತ್ತಿತ್ತು. ಕೊನೆಗೆ ಈ ಭಾಗದ ಶರಣರ, ಸಂತತರ ಆಶೀರ್ವಾದದಿಂದ ಗೆಲುವನ್ನು ಮುಡಿಗೇರಿಸಿಕೊಂಡು ಅಂಭ್ರಮಿಸಿದೆ. ಇದು ಕನ್ನಡಿಗರ ಗೆಲುವು ಎಂದು ಸಂತಸ ವ್ಯಕ್ತಪಡಿಸಿದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರತಿಭೆಗಳಿಗೇನೂ ಕೊರತೆಯಿಲ್ಲ. ಆದರೆ ಅವಕಾಶ ಕೊರತೆ ಇದ್ದು, ಸೂಕ್ತ ವೇದಿಕೆ ಒದಗಿಸಿ ಪ್ರೋತ್ಸಾಹಿಸಬೇಕಾಗಿದೆ. ಸರಿಗಮಪ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಈ ಭಾಗದ ಕೀರ್ತಿ ನಾಡಿನುದ್ದಗಲಕ್ಕೂ ಹೆಚ್ಚಿಸಿದ್ದಾರೆ. ಬರುವ ದಿನಗಳಲ್ಲಿ ರಾಷ್ಟç ಮಟ್ಟಕ್ಕೆ ಎತ್ತರಿಸಲು ಎಂದು ಶುಭ ಹಾರೈಸಿದರು.

ಸಂಗೀತ ಕಲಾವಿದರಾದ ಶಿವದಾಸ ಸ್ವಾಮಿ, ಕವಿತಾ ಸ್ವಾಮಿ, ಸಿದ್ಧಲಿಂಗ ಜಿ ಬಾಳಿ, ಸಾಹಿತ್ಯ ಪ್ರೇರಕರಾದ ಜಗದೀಶ ಮರಪಳ್ಳಿ, ಎಚ್.ಬಿ. ಪಾಟೀಲ, ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್. ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಸರಕಾರಿ ನೌಕರರ ಸಂಘದ ರಾಜ್ಯ ಸಮಿತಿ ಸದಸ್ಯ ಧರ್ಮರಾಜ ಜವಳಿ ಮಾತನಾಡಿದರು.

ಪ್ರಮುಖರಾದ ರವೀಂದ್ರಕುಮಾರ ಭಂಟನಳ್ಳಿ, ಅಮೃತಪ್ಪ ಅಣೂರ ಕವಿ, ದಿನೇಶ ಮದಕರಿ, ರಾಜೇಂದ್ರ ಮಾಡಬೂಳ, ರವಿಕುಮಾರ ಶಹಾಪುರಕರ್, ಶಿವಲೀಲಾ ಕಲಗುರ್ಕಿ, ಜ್ಯೋತಿ ಕೋಟನೂರ, ಪ್ರಭವ ಪಟ್ಟಣಕರ್, ಡಾ. ಎಸ್ ಎಂ ನೀಲಾ, ಮಂಜುನಾಥ ಕಂಬಾಳಿಮಠ, ಮಲ್ಲಿನಾಥ ಸಂಗಶೆಟ್ಟಿ, ಸುನೀತಾ ದೊಡ್ಮನಿ, ಮಹೇಶ ಬಾಳಿ, ಶರಣಬಸಪ್ಪ ಕೋಬಾಳ, ರೇವಣಸಿದ್ದಪ್ಪ ಜೀವಣಗಿ, ಶಿವಶರಣ ಬಡದಾಳ, ಶರಣು ಹಾಗರಗುಂಡಗಿ, ಎಂ.ಎನ್. ಸುಗಂಧಿ, ಶಿವಾನಂದ ಸುರವಸೆ, ಸಂತೋಷ ಕುಡಳ್ಳಿ, ರೇವಯ್ಯಾ ಸ್ವಾಮಿ, ಅನೀಲಕುಮಾರ ಪಾಟೀಲ ತೇಗಲತಿಪ್ಪಿ, ಸೋಮಶೇಖರ ನಂದಿಧ್ವಜ, ಶ್ರೀಕಾಂತ ಪಾಟೀಲ, ಅನುಪಮಾ ಅಪಗುಂಡೆ, ಶ್ರೀದೇವಿ ಕೋರೆ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...