ಕಲಬುರಗಿ | ಸ್ಲಂ ಬೋರ್ಡ್ ಕಚೇರಿ ಎದುರು ಫಲಾನುಭವಿಗಳ ಅನಿರ್ಧಿಷ್ಟಾವಧಿ ಸತ್ಯಾಗ್ರಹ

Date:

Share post:

 

ಕಲಬುರಗಿ: ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ನಗರದ ಕೆಸರಟಗಿ ಸಾರ್ವಜನಿಕರ ಪರವಾಗಿ ಕಲ್ಯಾಣ ಕರ್ನಾಟಕ ಸೇನೆ ವತಿಯಿಂದ ಸ್ಲಂ ಬೋರ್ಡ್ ಕಚೇರಿ ಎದುರು ಫಲಾನುಭವಿಗಳ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.

ಇಲ್ಲಿನ ಹೊರವಲಯದ ಕೆಸರಟಗಿಯ ಸರ್ವೆ ನಂಬರ್ 27 ಹಾಗೂ 28ರ ಅಂಬೇಡ್ಕರ್ ಅವಾಸ್ ಯೋಜನೆ ಅಡಿಯಲ್ಲಿ ಮಂಜುರಾದ 52 ಮನೆಗಳನ್ನು ಹಕ್ಕುಪತ್ರ ಕೊಡುವಂತೆ ಒತ್ತಾಯಿಸಿ ಎರಡು ದಿನಗಳಿಂದ ಅನಿರ್ಧಿಷ್ಟಾವಧಿ ಸತ್ಯಾಗ್ರಹ ನಡೆಸುತ್ತಿದ್ದು, 15 ವರ್ಷಗಳಿಂದ ವಾಸವಾಗಿದ್ದೇವೆ. ಅಧಿಕಾರಿಗಳು ಈವರೆಗೂ ಹಕ್ಕು ಪತ್ರ ನೀಡುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಹಕ್ಕು ಪತ್ರ ನೀಡುವವರಿಗೆ ಹೋರಾಟ ಕೈಬೀಡೆವು ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಲ್ಯಾಣ ಕರ್ನಾಟಕ ಸೇನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಹಯ್ಯಾಳಕರ್, ಮಹಾನಾಯಕ ಬಿಗೇಡ್ ರಾಜ್ಯ ಅಧ್ಯಕ್ಷ ಗುಂಡೇಶ್ ಹಾಗೂ ಮುತ್ತಣ್ಣ ಬಚನ್ ಸೇರಿದಂತೆ ಆಶ್ರಯ ವಂಚಿತ ಫಲಾನುಭವಿಗಳು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...