ಕಲಬುರಗಿ| ಕರ್ನಾಟಕ ನವನಿರ್ಮಾಣ ಸೇನೆಯ ಅಧ್ಯಕ್ಷರಾಗಿ ವಿಕಾಸ ಚವ್ಹಾಣ ನೇಮಕ

Date:

Share post:

ಕಲಬುರಗಿ: ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷರಾದ ಭೀಮಾಶಂಕರ ಪಾಟೀಲ ಅವರ ಆದೇಶದ ಮೇರೆಗೆ ಕಲಬುರಗಿ ನಗರ ಘಟಕದ ಅಧ್ಯಕ್ಷರನ್ನಾಗಿ ವಿಕಾಸ ಚವ್ಹಾಣ ಅವರನ್ನು ಸೇನೆಯ ಕಲಬುರಗಿ ಜಿಲ್ಲಾಧ್ಯಕ್ಷರಾದ ರವಿ ದೇಗಾಂವ ಅವರು ನೇಮಕ ಮಾಡಿದರು.

ಜಿಲ್ಲಾಧ್ಯಕ್ಷ ರವಿ ದೇಗಾಂವ ಮಾತನಾಡಿ ನಾಡು, ನುಡಿ, ಗಡಿ, ಜಲ ಭಾಷೆಯ ವಿಷಯದಲ್ಲಿ ಯಾವತ್ತೂ ಯಾರೊಂದಿಗೂ ರಾಜಿಯಾಗದೇ ಕೆಚ್ಚೆದೆಯ ಹೋರಾಟ ಮಾಡುವುದರ ಮೂಲಕ ಕನ್ನಡ ತಾಯಿಯ ಸೇವೆಯನ್ನು ಮಾಡೋಣ ಎಂದರು. ಜಿಲ್ಲೆಯ ಜಲ್ವಂತ ಸಮಸ್ಯೆಗಳ ಬಗ್ಗೆ ಹೋರಾಟ ಕೈಗೆತ್ತಿಕೊಂಡು ಜನಪ್ರತಿನಿಧಿಗಳ, ಅಧಿಕಾರಿಗಳ ಗಮನ ಸೆಳೆದು ಬಗೆಹರಿಸಲು ಪ್ರಯತ್ನಿಸೋಣ. ಸೇನೆಯ ತತ್ವ ಸಿದ್ದಾಂತಗಳಿಗೆ ಬದ್ದರಾಗಿ ಎಲ್ಲರೂ ಕಾಯಕದ ಜೊತೆಗೆ ನಾಡಿನ ಸೇವೆಗೆ ಕಂಕಣ ಬದ್ಧರಾಗಿ ಕನ್ನಡದ ಕರ್ನಾಟಕದ ಋಣ ತಿರಿಸೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಂಬು ಕಂಬಾರ್, ರಾಜು ಕಮಲಾಪುರೆ, ಚಂದ್ರು ಸಲಗರ, ಜಯಾನಂದ ಬಿರಾದಾರ್, ಶೇಖರ್ ವಗರಗಿ ಸೇರಿದಂತೆ ಸೇನೆಯ ಪದಾಧಿಕಾರಿಗಳು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...