ಕಲಬುರಗಿ | ಉದ್ಯಾನವನ ಅಭಿವೃದ್ಧಿಗೆ ಬದ್ಧ : ಶಾಸಕ ಅಲ್ಲಮಪ್ರಭು ಪಾಟೀಲ

Date:

Share post:

ಕಲಬುರಗಿ: ಉದ್ಯಾನವನಗಳ ಅಭಿವೃದ್ಧಿಗೆ ಬೇಕಾದ ಅಗತ್ಯ ಸೌಕರ್ಯ ಒದಗಿಸಲು ಸಿದ್ಧ ಎಂದು ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು.

ನಗರದ ಎನ್ಜಿಓ ಕಾಲೋನಿ ವಾರ್ಡ ಸಂಖ್ಯೆ 52 ರಲ್ಲಿ ಬರುವ ಶ್ರೀನಗರ ಉದ್ಯಾನವನದಲ್ಲಿ ಶುಕ್ರವಾರ ನಡೆದ ವನಮಹೋತ್ಸವ ಸರಳ ಕಾರ್ಯಕ್ರಮದಲ್ಲಿ ಸಸಿ ನೆಟ್ಟಿ ಬಡಾವಣೆ ನಿವಾಸಿಗಳ ಬೇಡಿಕೆಗಳಿಗೆ ಸ್ಪಂದಿಸಿದ ಅವರು, ಸುಂದರ ಉದ್ಯಾನವನ ನಿರ್ಮಾಣಕ್ಕಾಗಿ ಬೋರವೆಲ್ ಅಳವಡಿಕೆ, ಯೋಗಾಸನ ಮಾಡುವ ಸಾಧನಗಳು, ಮಕ್ಕಳ ಆಟಿಕೆಗಳು, ವಾಕಿಂಗ್ ಟ್ರ್ಯಾಕ್ ಸೇರಿದಂತೆ ಹೈಮಾಸ್ ಅಳವಡಿಸಲಾಗುವುದು ಎಂದು ಅವರು ತಿಳಿಸಿದರು.

 

ಈಗಾಗಲೇ ಹೈಮಾಸ್ ಅಳವಡಿಕೆಯಾಗಿದ್ದು, ಅದಕ್ಕೆ ಬೇಕಾದ ಬೆಳಕಿನ ವ್ಯವಸ್ಥೆ ಇಷ್ಟರಲ್ಲಿಯೇ ಮಾಡಲಾಗುವುದು. ಬಡಾವಣೆ ನಿವಾಸಿಗಳು ನೆಮ್ಮದಿಯಿಂದ ಇರಲು ಶಾಸಕನಾಗಿ ಅಗತ್ಯ ಸೌಲಭ್ಯ ನೀಡಲು ಬದ್ಧನಾಗಿರುವೆ ಎಂದರು.

ಈ ಸಂದರ್ಭದಲ್ಲಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ಧರ್ಮರಾಜ ಹೇರೂರ, ಮುಖಂಡರಾದ ಶರಣಗೌಡ, ಮಲ್ಲೇಶಪ್ಪ ಜಾಂಬಗೌಡ, ಶಾಂತು ಪಾಟೀಲ, ಮಾರುತಿ ಪ್ರೇಸ್ಟಿಜ್ ಫ್ಯ್ಲಾಟ ಓನರ್ಸ ಅಸೋಸಿಯೇಶನ್ ಅಧ್ಯಕ್ಷ ರಮೇಶ್ಚಂದ್ರ ದೇಶಮುಖ, ಉಪಾಧ್ಯಕ್ಷರಾದ ದೀಪಕಕುಮಾರ, ದೇವಿದಾಸ ಅರ್ಥಂ, ಜಯತೀರ್ಥ ಪಾಟೀಲ, ಉಮೇಶ ಕುಲಕರ್ಣಿ, ಜಗನ್ನಾಥ ಉಟಗಿ, ರಾಜಶೇಖರ ಹಾವಪ್ಪಗೋಳ, ಸಂಪತ್ಕುಮಾರ ದೇಶಪಾಂಡೆ, ದೇವಿಂದ್ರಪ್ಪ ಗೋಗಿ ಮುಂತಾದವರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...