ಸೇಡಂ| ಬಿ.ಮಹಾದೇವಪ್ಪ ಪ್ರಶಸ್ತಿಗೆ ಬಣಗಾರ, ಶಿವಾನಂದನ್ ಆಯ್ಕೆ

Date:

Share post:

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸೇಡಂ ತಾಲೂಕು ಘಟಕದಿಂದ ಆಚರಿಸುವ ಪತ್ರಿಕಾ ದಿನಾಚರಣೆಯಲ್ಲಿ ಹಿರಿಯ ಪತ್ರಕರ್ತ ಲಿಂ.ಬಿ.ಮಹಾದೇವಪ್ಪ ಅವರ ಹೆಸರಿನಲ್ಲಿ ಕೊಡಮಾಡುವ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಟಿ.ವಿ.ಶಿವಾನಂದನ್ ಹಾಗೂ ಸುಭಾಷ ಬಣಗಾರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ಶರಣು ಮಹಾಗಾಂವ ಹಾಗೂ ಪ್ರಧಾನ ಕಾರ್ಯದರ್ಶಿ ಸಿದ್ದಯ್ಯಸ್ವಾಮಿ ಆಡಕಿ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾಡಿನ ಹಿರಿಯ ಪತ್ರಕರ್ತರಲ್ಲಿ ಒಬ್ಬರಾದ ತಾಲೂಕಿನ ಬೆನಕನಹಳ್ಳಿಯ ಮಹಾದೇವಪ್ಪನವರ ಹೆಸರಿನಲ್ಲಿ ಕಳೆದ ವರ್ಷದಿಂದ ಪ್ರಶಸ್ತಿ ಕೊಡಮಾಡಲಾಗುತ್ತಿದೆ. ಅನೇಕ ವರ್ಷಗಳ ಕಾಲ ಪತ್ರಿಕೋದ್ಯಮದಲ್ಲಿ ಸೇವೆಗೈದು ಇದೀಗ ಶರಣಬಸವೇಶ್ವರ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿ ಕರ‍್ಯನಿರ್ವಹಿಸುತ್ತಿರುವ ಟಿ.ವಿ.ಶಿವಾನಂದನ್, ಸಂಯುಕ್ತ ಕರ್ನಾಟಕ ಪತ್ರಿಕೆಯ ಕಲಬುರಗಿ ಅವೃತ್ತಿಯ ಸ್ಥಾನಿಕ ಸಂಪಾದಕ ಸುಭಾಷ ಬಣಗಾರ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. ಇವರಿಗೆ ಪ್ರಶಸ್ತಿ ಪತ್ರ, ಫಲಕ ಮತ್ತು 5,000/- ನಗದು ನೀಡಿ ಗೌರವಿಸಲಾಗುತ್ತದೆ. ಇದೇ ವೇಳೆಯಲ್ಲಿ ಪತ್ರಿಕೆ ವಿತರಕ ಇಮಡಾಪೂರದ ರಜಾಕ್ ಅವರನ್ನು ವಿಶೇಷವಾಗಿ ಸತ್ಕರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...