ಕಲಬುರಗಿ| ಮೂವರ ಬೈಕ್ ಕಳ್ಳರ ಬಂಧನ; 29 ಬೈಕ್ ಜಪ್ತಿ: ಎಸ್ಪಿ ಅಡ್ಡೂರು ಶ್ರೀನಿವಾಸಲು

Date:

Share post:

ಕಲಬುರಗಿ: ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಬೈಕ್ ಕಳ್ಳರನ್ನು ಬಂಧಿಸುವಲ್ಲಿ ಚಿಂಚೋಳಿ ಪೊಲೀಸರು ಯಶಸ್ವಿಯಾಗಿದ್ದು, ಅವರಿಂದ 29 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹೇಳಿದ್ದಾರೆ.

ನಗರದ ಪೋಲಿಸ್ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆನಕಿಪಳ್ಳಿಯ ಶ್ರೀಕಾಂತ್ ಗಣಪತಿ (27), ಚಿಂಚೋಳಿಯ ಬಸಯ್ಯ ರಾಚಯ್ಯ ಸ್ವಾಮಿ (44) ಹಾಗೂ ಆರ್.ಜಿ.ನಗರದ ಅಭಿನಂದನ ಜೈಭಾರತ ಮಾನೆ ಎಂಬಾತರನ್ನು ವಶಕ್ಕೆ ಪಡೆದು ಅವರಿದ 5.41 ಲಕ್ಷ ರೂಪಾಯಿ ಮೌಲ್ಯದ ಒಟ್ಟು 29 ಹಿರೋ ಹೊಂಡಾ ಸ್ಪ್ಲೆಂಡರ್ ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದರು.

ಪ್ರಕರಣದ ತನಿಖೆ ಕಾರ್ಯದಲ್ಲಿ ಅಪರ ಪೊಲೀಸ್ ಅಧೀಕ್ಷಕ ಮಹೇಶ್ ಮೇಘಣ್ಣನವರ, ಉಪ ಅಧೀಕ್ಷಕ ಚಿಂಚೋಳಿಯ ಸಂಗಮನಾಥ ಹಿರೇಮಠ, ಸಿಪಿಐ ಕಪಿಲ್ ದೇವ್ ಮಾರ್ಗದರ್ಶನದಲ್ಲಿ, ಪಿಎಸ್ಐ ಗಂಗಮ್ಮ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ರಚಿಸಿ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ ಎಂದು ಅವರು ತಿಳಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...