ಕಲಬುರಗಿ| ವಸತಿ ಶಾಲೆಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

Date:

Share post:

ಕಲಬುರಗಿ: ವಸತಿ ಶಾಲೆಗೆ ಸೇರಿಸಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೇಡಂ ತಾಲೂಕಿನ ಮುಧೋಳದ ವಸತಿ ಶಾಲೆಯೊಂದರಲ್ಲಿ ಗುರುವಾರ ನಡೆದಿದೆ.

ಕಲಬುರಗಿ ತಾಲೂಕಿನ ಪಾಣೆಗಾಂವ್ ಗ್ರಾಮದ ನಾರಾಯಣ ರಾಠೋಡ್ (13) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ವಸತಿ ಶಾಲೆಗೆ ಸೇರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬಾಲಕ ನಾರಾಯಣ ರಾಠೋಡ್ ಈ ಹಿಂದೆ ಹೇಳಿದ್ದನು. ಈ ವೇಳೆ ಪೋಷಕರು ನಾರಾಯಣ ರಾಥೋಡ್ ನನ್ನು ಮನವೊಲಿಸಿ ಮುಧೋಳದ ಇಂದಿರಾ ಗಾಂಧಿ ವಸತಿ ಶಾಲೆಗೆ ದಾಖಲಿಸಿದ್ದರು.

ವಿದ್ಯಾರ್ಥಿ ನಾರಾಯಣನು ತಾಯಿಯನ್ನು ಬಿಟ್ಟಿರಲಾರದೆ ಆತ್ನಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ಧಿ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...