ಕಲಬುರಗಿ| ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ರ ಪ್ರವಾಸ

Date:

Share post:

ಕಲಬುರಗಿ: ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜುಲೈ 12 ರಂದು ಶನಿವಾರ ಮಧ್ಯಾಹ್ನ 12 ಗಂಟೆಗೆ ಕಲಬುರಗಿಗೆ ಆಗಮಿಸಿ, ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಮಾಡುವರು.

ಜುಲೈ 13 ರಂದು ಭಾನುವಾರ ಮಧ್ಯಾಹ್ನ 11.30 ಗಂಟೆಗೆ ಸೇಡಂ ತಾಲೂಕಿನ ಶಂಕರರಾಜಪುರ ಗ್ರಾಮದಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30 ಗಂಟೆಗೆ ಸೇಡಂ ತಾಲೂಕಿನ ಟಿ. ಅರಬೊಮ್ಮನಳ್ಳಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ ಎರಡು ಶಾಲಾ ಕೋಣೆಗಳ ಉದ್ಘಾಟನೆ ಹಾಗೂ ಸಿ.ಸಿ. ರಸ್ತೆ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು.

ಅಂದು ಮಧ್ಯಾಹ್ನ 3 ಗಂಟೆಗೆ ಶಿಲಾರಕೋಟ್ ಗ್ರಾಮದ ಸಾರ್ವಜನಿಕರ ಅಹವಾಲು ಸ್ವೀಕರಿಸುವರು. ಸಂಜೆ 4 ಗಂಟೆಗೆ ಮೇದಕ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ನಂತರ ಜುಲೈ 14 ರಂದು ಸೋಮವಾರ ಮಧ್ಯಾಹ್ನ 12.30 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...