ಕಲಬುರಗಿ| ಭೀಮಾ ನದಿಯಲ್ಲಿ ಈಜಲು ಹೋದ ವಿದ್ಯಾರ್ಥಿ ಸಾವು? 

Date:

Share post:

ಕಲಬುರಗಿ: ಭೀಮಾ ನದಿಯಲ್ಲಿ ಈಜಲು ಹೋದ 14 ವರ್ಷದ ಬಾಲಕ ನಾಪತ್ತೆಯಾಗಿರುವ ಘಟನೆ ಜೇವರ್ಗಿ ತಾಲೂಕಿನ ಕೂಟನೂರ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಎಂಟನೇ ತರಗತಿ ಓದುತ್ತಿರುವ ಜೇವರ್ಗಿ ತಾಲೂಕಿನ ಕೂಟನೂರ್ ಗ್ರಾಮದ ಮೌನೇಶ್ ಸಿದ್ದರಾಮ್ ತುರಾಯಿ (14) ನಾಪತ್ತೆಯಾಗಿರುವ ಬಾಲಕ ಎಂದು ಗುರುತಿಸಲಾಗಿದೆ.

ಸೋಮವಾರ ಮನೆಯವರೆಲ್ಲ ಹೊಲಕ್ಕೆ ಹೋದ ಕಾರಣ, ಮೌನೇಶ್ ಕೂಡ ಹೊಲಕ್ಕೆ ಹೋಗಿ ಭೀಮಾ ನದಿಯ ದಡದಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದಾನೆ ಎನ್ನಲಾಗುತ್ತಿದೆ. ಸಿದ್ದರಾಮ ತುರಾಯ ಅವರಿಗೆ ಮೂರು ಮಕ್ಕಳಿದ್ದು ಅದರಲ್ಲಿ ಎರಡನೇ ಮಗ ಮೌನೇಶ್ ಈಜಲು ಹೋಗಿ ಮೃತಪಟ್ಟಿರುವುದಾಗಿ ಶಂಕಿಸಲಾಗುತ್ತಿದೆ.

ಸ್ಥಳಕ್ಕೆ ನೆಲೋಗಿ ಠಾಣೆಯ ಪೊಲೀಸರು ಹಾಗೂ ಜೇವರ್ಗಿ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಮೃತದೇಹಕ್ಕಾಗಿ ಶೋಧನಾ ಕಾರ್ಯ ನಡೆಯುತ್ತಿದೆ.

Share post:

spot_imgspot_img

Popular

More like this
Related

ಕಲಬುರಗಿ: ಮಿಣಜಗಿಯಲ್ಲಿ ಹೊಸ ಕಟ್ಟಡಗಳ ಲೋಕಾರ್ಪಣೆ

ಕಲಬುರಗಿ ತಾಲೂಕಿನ ಮಿಣಜಗಿ ಗ್ರಾಮದಲ್ಲಿ 2023–24ನೇ ಸಾಲಿನ ವಿವಿಧ ಅಭಿವೃದ್ಧಿ ಯೋಜನೆಗಳ...

ಕಲಬುರಗಿ| ಫೆ.12 ರಿಂದ ಡಿ.ಇ.ಸಿ. ಸಾಮೂಹಿಕ ಗುಳಿಗೆ ನುಂಗಿಸುವ ಕಾರ್ಯಕ್ರಮ: ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚನೆ

ಕಲಬುರಗಿ: ಆನೆಕಾಲು ರೋಗ ಬಾರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಇದೇ ಫೆಬ್ರವರಿ 12...

ಕಲಬುರಗಿ| ಚಾಂದ ಬೀಬೀ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಕಲಬುರಗಿ: ಚಾಂದ ಬೀ ಬೀ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ 77ನೆಯ ಗಣರಾಜ್ಯೋತ್ಸವ...

ಕಲಬುರಗಿ| ಹಾಸ್ಟೆಲ್ ಸಿಬ್ಬಂದಿಗಳಿಗೆ ಐದು ತಿಂಗಳಿಂದ ಸಿಗದ ವೇತನ; ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಳೆದ 16-20...