ಕಲಬುರಗಿ| ಭೀಮಾ ನದಿಯಲ್ಲಿ ಈಜಲು ಹೋದ ವಿದ್ಯಾರ್ಥಿ ಸಾವು? 

Date:

Share post:

ಕಲಬುರಗಿ: ಭೀಮಾ ನದಿಯಲ್ಲಿ ಈಜಲು ಹೋದ 14 ವರ್ಷದ ಬಾಲಕ ನಾಪತ್ತೆಯಾಗಿರುವ ಘಟನೆ ಜೇವರ್ಗಿ ತಾಲೂಕಿನ ಕೂಟನೂರ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಎಂಟನೇ ತರಗತಿ ಓದುತ್ತಿರುವ ಜೇವರ್ಗಿ ತಾಲೂಕಿನ ಕೂಟನೂರ್ ಗ್ರಾಮದ ಮೌನೇಶ್ ಸಿದ್ದರಾಮ್ ತುರಾಯಿ (14) ನಾಪತ್ತೆಯಾಗಿರುವ ಬಾಲಕ ಎಂದು ಗುರುತಿಸಲಾಗಿದೆ.

ಸೋಮವಾರ ಮನೆಯವರೆಲ್ಲ ಹೊಲಕ್ಕೆ ಹೋದ ಕಾರಣ, ಮೌನೇಶ್ ಕೂಡ ಹೊಲಕ್ಕೆ ಹೋಗಿ ಭೀಮಾ ನದಿಯ ದಡದಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದಾನೆ ಎನ್ನಲಾಗುತ್ತಿದೆ. ಸಿದ್ದರಾಮ ತುರಾಯ ಅವರಿಗೆ ಮೂರು ಮಕ್ಕಳಿದ್ದು ಅದರಲ್ಲಿ ಎರಡನೇ ಮಗ ಮೌನೇಶ್ ಈಜಲು ಹೋಗಿ ಮೃತಪಟ್ಟಿರುವುದಾಗಿ ಶಂಕಿಸಲಾಗುತ್ತಿದೆ.

ಸ್ಥಳಕ್ಕೆ ನೆಲೋಗಿ ಠಾಣೆಯ ಪೊಲೀಸರು ಹಾಗೂ ಜೇವರ್ಗಿ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಮೃತದೇಹಕ್ಕಾಗಿ ಶೋಧನಾ ಕಾರ್ಯ ನಡೆಯುತ್ತಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...