ಕಲಬುರಗಿ| ಸಮಾಜದ ಒಳತಿಗಾಗಿ ದುಡಿದ ಹಾನಗಲ್ಲ ಶಿವಯೋಗಿ: ಡಾ.ಶರಣಪ್ರಕಾಶ ಪಾಟೀಲ

Date:

Share post:

ಕಲಬುರಗಿ: ಹಾನಗಲ್ಲ ಶಿವಯೋಗಿಗಳು ಕನ್ನಡ ನಾಡು ನುಡಿ, ಕಂಡ ಶ್ರೇಷ್ಠ ಮಠಾಧಿಪತಿಗಳು ಅಖಿಲ ಭಾರತ ವೀರಶೈವ ಮಹಾಸಭೆ, ಶಿವಯೋಗ ಮಂದಿರ ಇವುಗಳನ್ನು ಸ್ಥಾಪಿಸುವುದರ ಜೊತೆಗೆ ನಾಡಿನ ಎಲ್ಲ ಮೂಲೆಗಳಲ್ಲಿ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಜ್ವಲಂತ ಸಾಕ್ಷಿಯಾಗಿದ್ದಾರೆ ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.

ಸೇಡಂ ರಸ್ತೆ ವಿದ್ಯಾನಗರ ವೆಲ್‌ಫೇರ್ ಸೊಸೈಟಿಯ ಆಶ್ರಯದಲ್ಲಿ ಹಮ್ಮಿಕೊಂಡ ಹಾನಗಲ್ಲ ಗುರುಕುಮಾರ ಶಿವಯೋಗಿಗಳ ಪುರಾಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜದ ಒಳತಿಗಾಗಿ ಹಗಲಿರುಳು ದುಡಿದ ಕಾವಿ ಕುಲದ ಸಂತ, ಗಾನಗಲ್ಲ ಕುಮಾರ ಶಿವಯೋಗಿಗಳು ಶಿವಯೋಗ ಮಂದಿರ ಕಟ್ಟುವುದರ ಮೂಲಕ ಸ್ವಾಮಿಗಳನ್ನು ತಯಾರಿಸಿದರು. ಸಮಾಜ ಯಾವತ್ತು ಅಂಧಕಾರದಿoದ ಶಿಕ್ಷಣದಿಂದ ಸಂಸ್ಕಾರದಿoದ ಅನಾಥ ಆಗಬಾರದೆಂದು ಸಮಾಜಕ್ಕೆ ಹಗಲಿರುಳು ದುಡಿದವರು ಹಾನಗಲ್ಲ ಶ್ರೀಗಳು ಎಂದರು.

ದಿವ್ಯ ಸಾನಿಧ್ಯ ವಹಿಸಿದ ಗದ್ದುಗೆ ಮಠದ ಚರಲಿಂಗ ಮಹಾಸ್ವಾಮಿ ಮಾತನಾಡುತ್ತಾ, ನಾನು ಕಂಡ ಧೀಮಂತ ಯತಿಗಳಾದ ಹಾನಗಲ್ಲ ಶ್ರೀಗಳು. ಮಹಿಳೆಯರಿಗೆ ಸಮಾನತೆ, ಶಿಕ್ಷಣ ನೀಡಿದ ಪುಣ್ಯವಂತರು ಗೋವುಗಳನ್ನು ರಕ್ಷಿಸುವುದರ ಜೊತೆಗೆ ಶುದ್ಧ ವಿಭೂತಿಗಳನ್ನು ತಯಾರಿಸಿದರು. ಹರಿದು ಹಂಚಿ ಹೋಗುವ ಸಮಾಜಕ್ಕೆ ಬೆಳಕಾದವರು. ಕನ್ನಡ ವಚನ ಸಾಹಿತ್ಯದ ಶಿಕ್ಷಣಕ್ಕೆ ಅಪಾರವಾಗಿ ಕೊಡುಗೆ ನೀಡಿದ ಅಪಾರ ವಿದ್ಯಾವಂತ ಹಾನಗಲ್ಲ ಶ್ರೀಗಳ ಪುರಾಣ ಪ್ರವಚನ ವಿದ್ಯಾನಗರದಲ್ಲಿ ಹಮ್ಮಿಕೊಂಡಿದ್ದು, ಬಹಳ ಸೂಕ್ತ ಹಾಗೂ ಮೆಚ್ಚುವಂತದ್ದು ಎನ್ನುತ್ತ ಮಹಾಪುರಾಣ ಭಕ್ತಿ, ಜ್ಞಾನ, ವೈರಾಗ್ಯ, ತ್ಯಾಗಗಳಿಂದ ಕೂಡಿದ ಪುರಾಣವಾಗಿದೆ ಎಂದು ಆಶೀರ್ವಚನ ನೀಡಿದರು.

ನಗರ ಪೋಲಿಸ್ ಆಯುಕ್ತ ಶರಣಪ್ಪ ಎಸ್.ಡಿ. ಅತಿಥಿಗಳಾಗಿ ಆಗಮಿಸಿದರು.

ಪ್ರಾರಂಭದಲ್ಲಿ ಮಧು ಹಿಂದೊಡ್ಡಿ, ರೇಖಾ ಅಂಡಗಿ, ತಾರಾ ಪಾಟೀಲ, ಶ್ರೀದೇವಿ ತಂಬಾಕೆ, ಹಾನಗಲ್ಲ ಶ್ರೀಗಳ ಕುರಿತು ಪ್ರಾರ್ಥನಾ ಗೀತೆ ಹಾಡಿದರು. ಡಾ. ಗುರುರಾಜ ಮುಗಳಿ ವಂದನಾರ್ಪಣೆ ಮಾಡಿದರು.

ವಿದ್ಯಾನಗರದ ವೆಲ್‌ಫೇರ್ ಸೊಸೈಟಿಯ ಅಧ್ಯಕ್ಷ ಮಲ್ಲಿನಾಥ ದೇಶಮುಖ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಉಮೇಶ ಶೆಟ್ಟಿ, ಕಾರ್ಯದರ್ಶಿ ಶಿವರಾಜ ಅಂಡಗಿ, ಖಜಾಂಚಿ ಗುರುಲಿಂಗಯ್ಯ ಮಠಪತಿ ವೇದಿಕೆ ಮೇಲೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪುರಾಣ ಕಾರ್ಯಕ್ರಮದ ಸಮಿತಿಯ ಸುಭಾಷ ಮಂಠಾಳೆ, ಗುರುಲಿಂಗಯ್ಯ ಮಠಪತಿ, ಉದಯಕುಮಾರ ಪಡಶೆಟ್ಟಿ, ನಾಗರಾಜ ಹೆಬ್ಬಾಳ, ಶಾಂತಯ್ಯ ಬೀದಿಮನಿ ಹಾಗೂ ವೆಲ್‌ಫೇರ್ ಸೊಸೈಟಿಯ ಅಕ್ಕಮಹಾದೇವಿ ಮಹಿಳಾ ಟ್ರಸ್ಟಿನ ಹಾಗೂ ಮಲ್ಲಿಕಾರ್ಜುನ ತರುಣ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...