ಕಲಬುರಗಿ| ಕೇಂದ್ರ ಕಸಾಪಕ್ಕೆ ಸೈಯ್ಯದ್ ನಜಿರುದ್ದೀನ್ ಮುತ್ತವಲಿ ನಾಮನಿರ್ದೇಶನ

Date:

Share post:

ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಾರ್ಯಕಾರಿ ಸಮಿತಿಯ ಸಂಘ-ಸoಸ್ಥೆಗಳ ಪ್ರತಿನಿಧಿಯಾಗಿ ಕಲಬುರಗಿ ಜಿಲ್ಲಾ ನಿವೃತ್ತ ಅಲ್ಪಸಂಖ್ಯಾತರ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಸೈಯ್ಯದ್ ನಜಿರುದ್ದೀನ್ ಮುತ್ತವಲಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಮುಸ್ಲಿಂ ಸಮುದಾಯಕ್ಕೆ ಸೇರಿದ ಮುತ್ತವಲಿ ಅವರು, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಕುರಿತು ಅಪಾರ ಆಸಕ್ತಿ ಹೊಂದಿದ್ದಾರೆ. ಹಲವು ಸಾಮಾಜಿಕ ಸಂಘಟನೆಗಳೊoದಿಗೆ ಒಡನಾಟ ಹೊಂದಿದ್ದು, ನಿರಂತರ ಹೋರಾಟಗಳಲ್ಲಿ ತೊಡಗಿಸಿಕೊಂಡಿರುವ ಇವರ ಕನ್ನಡ ಪರ ಕಾಳಜಿ ಪರಿಗಣಿಸಿ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ.

ರಾಜ್ಯ ಕಾರ್ಯಕಾರಿ ಸಮಿತಿಗೆ ಕಲಬುರಗಿ ಜಿಲ್ಲೆಯ ಹೋರಾಟಗಾರರೊಬ್ಬರಿಗೆ ಅವಕಾಶ ನೀಡಿರುವುದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರು ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ಧನ್ಯವಾದಗಳು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...